ಬೆಂಗಳೂರು: ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ.
ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ನ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಸಲು ಜೆಡಿಎಸ್, ಬಿಜೆಪಿ ಮೈತ್ರಿ ಮುಂದಾಗಿದೆ.
ಬಿಜೆಪಿಯಿಂದ ಸಂಸದ ಸುರೇಶ್ ವಿರುದ್ಧ ಸ್ಪರ್ಧೆ ಮಾಡಲು ಮಂಜುನಾಥ್ ಸಮ್ಮತಿಸಿದ್ದಾರೆ ಎನ್ನಲಾಗಿದೆ.
ಮಂಜುನಾಥ್ ಸ್ಪರ್ಧೆ ಸಂಬಂಧ ಮಂಗಳವಾರ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ದೆಹಲಿಯಲ್ಲಿ ಅಂತಿಮ ಮಾತುಕತೆ ನಡೆಸಲಿದ್ದಾರೆ.
ಸ್ಪರ್ಧೆಗೆ ಮಂಜುನಾಥ್ ಒಪ್ಪಿಗೆ ನೀಡಿರುವ ಬಗ್ಗೆ ಕುಮಾರಸ್ವಾಮಿ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಾರವಷ್ಟೇ ಬೆಂಗಳೂರಿನ ಹೆಚ್ಡಿ ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಸಭೆಯಲ್ಲಿ ಮಂಜುನಾಥ್ ಅವರನ್ನು ಮನವೊಲಿಸಿ ಕಣಕ್ಕಿಳಿಸುವ ಬಗ್ಗೆ ಚರ್ಚೆಯಾಗಿತ್ತು.
ಸಭೆಯಲ್ಲಿ ಮಾಜಿ ಸಚಿವರಾದ ಸಿಪಿ ಯೋಗೆಶ್ವರ್, ಮುನಿರತ್ನ, ಶಾಸಕ ಎಂ ಕೃಷ್ಣಪ್ಪ, ನಿಖಿಲ್ ಕುಮಾರಸ್ವಾಮಿ ಸೇರಿ ಉಭಯ ಪಕ್ಷಗಳ ನಾಯಕರು ಭಾಗಿಯಾಗಿ ಮಂಜುನಾಥ್ ಸ್ಪರ್ಧೆ ಪರ ಒಲವು ವ್ಯಕ್ತಪಡಿಸಿದ್ದ
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…