BREAKING NEWS

ಬೆಂಗಳೂರು ಗ್ರಾಮಾಂತರದಿಂದ ಡಾ.ಮಂಜುನಾಥ್‌ ಸ್ಪರ್ಧೆ ಖಚಿತ !

ಬೆಂಗಳೂರು: ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಿಂದ ಡಾ‌. ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ.

ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್​ನ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಸಲು ಜೆಡಿಎಸ್, ಬಿಜೆಪಿ ಮೈತ್ರಿ ಮುಂದಾಗಿದೆ.

ಬಿಜೆಪಿಯಿಂದ ಸಂಸದ ಸುರೇಶ್ ವಿರುದ್ಧ ಸ್ಪರ್ಧೆ ಮಾಡಲು ಮಂಜುನಾಥ್ ಸಮ್ಮತಿಸಿದ್ದಾರೆ ಎನ್ನಲಾಗಿದೆ.

ಮಂಜುನಾಥ್ ಸ್ಪರ್ಧೆ ಸಂಬಂಧ ಮಂಗಳವಾರ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ದೆಹಲಿಯಲ್ಲಿ ಅಂತಿಮ ಮಾತುಕತೆ ನಡೆಸಲಿದ್ದಾರೆ.

ಸ್ಪರ್ಧೆಗೆ ಮಂಜುನಾಥ್ ಒಪ್ಪಿಗೆ ನೀಡಿರುವ ಬಗ್ಗೆ ಕುಮಾರಸ್ವಾಮಿ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ವಾರವಷ್ಟೇ ಬೆಂಗಳೂರಿನ ಹೆಚ್​ಡಿ ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಸಭೆಯಲ್ಲಿ ಮಂಜುನಾಥ್ ಅವರನ್ನು ಮನವೊಲಿಸಿ ಕಣಕ್ಕಿಳಿಸುವ ಬಗ್ಗೆ ಚರ್ಚೆಯಾಗಿತ್ತು.

ಸಭೆಯಲ್ಲಿ ಮಾಜಿ‌ ಸಚಿವರಾದ ಸಿಪಿ ಯೋಗೆಶ್ವರ್, ಮುನಿರತ್ನ, ಶಾಸಕ ಎಂ ಕೃಷ್ಣಪ್ಪ, ನಿಖಿಲ್ ಕುಮಾರಸ್ವಾಮಿ ಸೇರಿ ಉಭಯ ಪಕ್ಷಗಳ ನಾಯಕರು ಭಾಗಿಯಾಗಿ ಮಂಜುನಾಥ್ ಸ್ಪರ್ಧೆ ಪರ ಒಲವು ವ್ಯಕ್ತಪಡಿಸಿದ್ದ

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

4 hours ago