BREAKING NEWS

‘ಕೇಶವಕೃಪ’ದವರು ನೋಡಲೆಂದು ಸದನದಲ್ಲಿ ಬಿಜೆಪಿಯವರಿಂದ ನಾಟಕ: ಸಿಎಂ ಕಿಡಿ

ಬೆಂಗಳೂರು : ಕೇಶವಕೃಪದವರು ನೋಡಲಿ ಎಂದು ಬಿಜೆಪಿಯವರು ಇಲ್ಲಿ ಡ್ರಾಮ ಮಾಡಿದ್ದಾರೆ. ನಾವು ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಉಪಸಭಾಧ್ಯಕ್ಷರ ಮುಖಕ್ಕೆ ಕಾಗದಗಳನ್ನು ಹರಿದು ಎಸೆದದ್ದು ಮತ್ತು ಸ್ಪೀಕರ್ ಪೀಠಕ್ಕೆ ಅವಮಾನಿಸಿದ್ದನ್ನು ವಿರೋಧಿಸಿ ಸದನದಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಥಪೂರ್ಣ ವಿರೋಧ ಪಕ್ಷ ಇರಬೇಕು. ಈ ಕಾರಣಕ್ಕೇ ನಾವು ಬಿಜೆಪಿ ಮುಕ್ತ ಎನ್ನುವ ಮಾತನ್ನು ಯಾವತ್ತೂ ಆಡಿಲ್ಲ. ಅವರು ಯಾವಾಗಲೂ ವಿರೋಧ ಪಕ್ಷದಲ್ಲೆ ಇರಬೇಕು. ಇವರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಗೌರವ ಇಲ್ಲ ಎಂದು ಕಿಡಿಗಾರಿದರು.

ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತು ಸದನದ ನಿಯಮಾವಳಿಗಳ ಆಧಾರದಲ್ಲಿ ಪ್ರತಿಭಟನೆ ನ ಡೆಸಲು ಬಿಜೆಪಿಯವರಿಗೆ ಅವಕಾಶ ಇತ್ತು. ಆದರೆ ಉಪಸಭಾಧ್ಯಕ್ಷರ ಮುಖಕ್ಕೆ ಪತ್ರ ಎಸೆಯುವುದು, ಸ್ಪೀಕರ್ ಪೀಠಕ್ಕೆ ಅಗೌರವ ತೋರುವುದು, ಅವಮಾನ ಮಾಡುವುದು ನಿಯಮ ಬಾಹಿರ. ಇದು ಅನಾಗರಿಕ ನಡವಳಿಕೆ ಎಂದು ಅವರು ಹೇಳಿದರು.

ಎಚ್.ಡಿ.ಕುಮಾರಸ್ವಾಮಿ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲೂ ಐಎಎಸ್ ಅಧಿಕಾರಿಗಳನ್ನೇ ಲೈಸನಿಂಗ್ ಅಧಿಕಾರಿಗಳನ್ನಾಗಿ ಮಾಡಿದ್ದರು. ಆದೆಲ್ಲಾ ಅವರಿಗೆ ಮರೆತುಹೋಯ್ತಾ ? ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ 2015ರಲ್ಲಿ ರಾಜ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಗೆ ಬರುವ ಬಿಜೆಪಿ ರಾಷ್ಟ್ರೀಯ ನಾಯಕರನ್ನು ರಾಜ್ಯದ ಅತಿಥಿಗಳನ್ನಾಗಿ ಘೋಷಿಸಿ ಆ ಶಿಷ್ಟಾಚಾರದಂತೆ ಕ್ರಮ ವಹಿಸಲು ನನ್ನ ಬಳಿ ಬಂದು ಮನವಿ ಮಾಡಿದ್ದರು ಎಂದು ಅವರು ಹೇಳಿದರು.

ಆಗ ನಾನು ಮುಖ್ಯಮಂತ್ರಿ ಆಗಿ ಬಿಜೆಪಿ ನಾಯಕರಿಗೆ ಶಿಷ್ಟಾಚಾರದ ಪ್ರಕಾರ ರಾಜ್ಯದ ಅತಿಥಿಗಳು ಎಂದು ಘೋಷಿಸಿ ಗೌರವ ನೀಡಿದ್ದೆವು. ಇದು ಬಿಜೆಪಿಯವರಿಗೆ ಸ್ಪಷ್ಟವಾಗಿ ಗೊತ್ತಿದ್ದೂ ಸುಳ್ಳು ಹೇಳುತ್ತಾ ನಕಲಿ ಪ್ರತಿಭಟನೆಯ ಡ್ರಾಮಾ ಮಾಡಿದ್ದಾರೆ. ಸ್ಪೀಕರ್ ಜತೆ ಮತ್ತು ಅವರ ಪೀಠದ ಎದುರು ಅತ್ಯಂತ ಅಸಹ್ಯವಾಗಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆರಿಸಿಕೊಳ್ಳುವ ಯೋಗ್ಯತೆ ಇಲ್ಲ. ಅತಿಥಿಗಳನ್ನು ಸತ್ಕರಿಸಿದರೆ ನಮ್ಮ ಮತ್ತು ನಮ್ಮ ರಾಜ್ಯದ ಗೌರವ ಹೆಚ್ಚುತ್ತದೆ. ನಾವು ರೈತರ ಪರವಾಗಿ, ಕಾರ್ಮಿಕರ ಪರವಾಗಿ, ಕೂಲಿಗಳ ಪರವಾಗಿ, ಶ್ರಮಿಕರ ಪರವಾಗಿ, ದಲಿತ-ಹಿಂದುಳಿದವರ-ಅಲ್ಪಸಂಖ್ಯಾತರ ಬದುಕನ್ನು ಎತ್ತರಿಸಲು ಹೋರಾಟ ನಡೆಸಿ ಅಧಿಕಾರಕ್ಕೆ ಬಂದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ದೇಶದ ವಿವಿಧ ರಾಜ್ಯಗಳ ನಾಯಕರು ಭಾರತವನ್ನು ಕಟ್ಟಲು, ಉಳಿಸಲು ಹೋರಾಟ ಮಾಡಲು ಅವರದೆ ಆದ ಸಿದ್ಧಾಂತ ಇಟ್ಟುಕೊಂಡು ಬಂದಿದ್ದಾರೆ. ಶಿಷ್ಠಾಚಾರದಂತೆ ಅವರನ್ನು ಸ್ವಾಗತಿಸಿದ್ದೇವೆ. ಅದನ್ನು ಸಹಿಸಿಕೊಳ್ಳಲು ವಿಪಕ್ಷದವರಿಗೆ ಆಗುತ್ತಿಲ್ಲ. ಆಂತರಿಕವಾಗಿ ಅವರಲ್ಲಿ ಗಲಾಟೆಯಿದೆ. ಬಜೆಟ್, ರಾಜ್ಯಪಾಲರ ಭಾಷಣದ ಅಧಿವೇಶನ ನಡೆಯುತ್ತಿದೆ. ವಿಪಕ್ಷ ನಾಯಕ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇವರ ನಾಟಕ, ಡ್ರಾಮ, ಆಟಗಳಿಗೆಲ್ಲ ನಾವು ಸೊಪ್ಪ ಹಾಕುವುದಿಲ್ಲ. ಸ್ಪೀಕರ್ ಸ್ಥಾನಕ್ಕೆ ಕೊಟ್ಟ ಅಗೌರವವನ್ನು ನಾವು ಒಗ್ಗಟ್ಟಿನಿಂದ ಖಂಡಿಸುತ್ತೇವೆ. ನಿಮಗೆ ಧೈರ್ಯ ತುಂಬಲು ಬದ್ಧರಾಗಿದ್ದೇವೆ.

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

11 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

14 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

14 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

15 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

17 hours ago