ವಿಜಯಪುರ : ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್ ಬಂಕ್ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ ನಡೆದಿದೆ. ಮುರಿಗೆಪ್ಪ ಅಥಣಿ ಮೃತ ಚಾಲಕ. ಮಂಗಳವಾರ ಸಾಯಂಕಾಲ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಕಲಬುರಗಿ ಜಿಲ್ಲೆಯ ಅಪ್ಜಲಪುರದಿಂದ ವಿಜಯಪುರಕ್ಕೆ ಹೊರಟಿತ್ತು. ದಾರಿ ಮಧ್ಯೆ ಬಸ್ ಹೆಡ್ಲೈಟ್ ಸಮಸ್ಯೆಯಾಗಿ ಬಂದ್ ಆಗಿದೆ. ಈ ಹಿನ್ನೆಲೆ ದಾರಿ ಮಧ್ಯೆ ಪ್ರಯಾಣಿಕರನ್ನು ಕೆಳಗೆ ಇಳಿಸಿ, ಸಿಂದಗಿ ಡಿಪೋಗೆ ಬಸ್ ಹೊರಟಿತ್ತು.
ಹೀಗೆ ಹೊರಡುವಾಗ ಬಸ್ ಸಿಂದಗಿ ನಗರ ಪ್ರವೇಶಿಸುತ್ತಿದ್ದಂತೆ ಚಾಲಕ ಮುರಿಗೆಪ್ಪ ಅಥಣಿ ಅವರಿಗೆ ಹೃದಯಾಘಾತವಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಆಗ ಬಸ್ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್ಗೆ ನುಗ್ಗುತ್ತಿದ್ದಂತೆ ಅಕ್ಕ-ಪಕ್ಕದಲ್ಲಿದ್ದ ಜನ ಗಾಭರಿಯಿಂದ ಚಲ್ಲಾಪಿಲ್ಲಿಯಾಗಿದ್ದಾರೆ.
ಇದನ್ನು ಕಂಡ ನಿರ್ವಾಹಕ ಶರಣು ಟಾಕಳಿಯವರು ಬಸ್ನ ಬ್ರೇಕ್ ಹಿಡಿದು ನಿಲ್ಲಿಸಿದ್ದಾರೆ. ಕಂಡೆಕ್ಟರ್ ಶರಣು ಅವರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಅಲ್ಲದೇ ಬಸ್ನಲ್ಲಿ ಪ್ರಯಾಣಿಕರು ಇಲ್ಲದೆ ಇರುವುದರಿಂದ ಸಂಭವನೀಯ ಅಪಾಯ ತಪ್ಪಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಪ್ಜಲಪುರ ಡಿಪೋ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…