BREAKING NEWS

ಪಠ್ಯ ಪುಸ್ತಕಗಳಿಂದ ನಮ್ಮ ಹೆಸರು ಕೈಬಿಡಿ: ಎನ್‌ಸಿಇಆರ್‌ಟಿಗೆ 33 ಶೀಕ್ಷಣ ತಜ್ಞರ ಪತ್ರ

ನವದೆಹಲಿ: ಸಮಷ್ಟಿಯಾಗಿ ಸೃಜನಶೀಲತೆಯಿಂದ ರೂಪಿಸಿದ್ದ ಪಠ್ಯಪುಸ್ತಕಗಳ ಸ್ವರೂಪವೇ ಬದಲಾಗಿದೆ. ಹೀಗಾಗಿ ನಮ್ಮ ಹೆಸರುಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡಬೇಕು ಎಂದು 33 ಮಂದಿ ಶಿಕ್ಷಣ ತಜ್ಞರು ಗುರುವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದಾರೆ.

ರಾಜಕೀಯ ಚಿಂತಕರಾದ ಯೋಗೇಂದ್ರ ಯಾದವ್‌ ಮತ್ತು ಸುಹಾಸ್‌ ಫಾಲ್‌ಸಿಕರ್‌ ಅವರು ಇಂತಹುದೇ ಬೇಡಿಕೆಯನ್ನು ಈಗಾಗಲೇ ಇಟ್ಟಿದ್ದಾರೆ. ಈ ಎಲ್ಲರೂ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯ(ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ರಚನಾ ಸಮಿತಿ ಭಾಗವಾಗಿದ್ದರು.

ಹೆಸರು ಕೈಬಿಡಲು ಕೋರಿ ಎನ್‌ಇಆರ್‌ಟಿ ನಿರ್ದೇಶಕ ದಿನೇಶ್ ಸಕ್ತಾನಿ ಅವರಿಗೆ ಪತ್ರ ಬರೆದಿರುವ ಪ್ರಮುಖರು: ಜೆಎನ್‌ಯು ಮಾಜಿ ಪ್ರೊಫೆಸರ್ ಕಾಂತಿ ಪ್ರಸಾದ್‌ ಬಾಜಪೇಯಿ, ಅಶೋಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರತಾಪ್ ಭಾನು ಮೆಹ್ರಾ, ಸಿಎಸ್‌ಡಿಎಸ್‌ನ ಮಾಜಿ ನಿರ್ದೇಶಕ ರಾಜೀವ್ ಭಾರ್ಗವ, ಜೆಎನ್‌ಯು ಮಾಜಿ ಪ್ರೊಫೆಸರ್ ನೀರಜಾ ಗೋಪಾಲ್ ಜಯಲ್, ಜೆಎನ್‌ಯು ಪ್ರೊಫೆಸರ್ ನಿವೇದಿತಾ ಮೆನನ್, ಸಿವಿಲ್ ಸೊಸೈಟಿ ವಾಚ್‌ಡಾಗ್ ಕಾಮನ್‌ ಕಾಸ್‌ ಸಂಸ್ಥೆಯ ಮುಖ್ಯಸ್ಥ ವಿಪುಲ್ ಮುದ್ದಲ್, ಹೈದರಾಬಾದ್ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಕೆ.ಸಿ.ಸೂರಿ, ಭಾರತೀಯ ಅಧ್ಯಯನ ಸಂಸ್ಥೆಯ ಮಾಜಿ ನಿರ್ದೇಶಕ ಪೀಟರ್ ರೊನಾಲ್ಡ್ ಡಿಸೋಜ.

‘ಮೂಲ ಪಠ್ಯಪುಸ್ತಕ ಸಾಕಷ್ಟು ಪರಿಷ್ಕರಣೆಗೊಂಡಿದೆ. ಈಗ ವಿಭಿನ್ನ ಪಠ್ಯಪುಸ್ತಕವಾಗಿಯೇ ರೂಪುಗೊಂಡಿದೆ. ಇದನ್ನು ನಾವು ರೂಪಿಸಿದ್ದು ಎಂದು ಹೇಳಿಕೊಳ್ಳುವುದೂ ಕಷ್ಟವಾಗುತ್ತದೆ. ಈ ಕಾರಣದಿಂದ ಪಠ್ಯಪುಸ್ತಕಗಳಿಂದ ನಮ್ಮಹೆಸರು ಕೈಬಿಡಬೇಕು. ನಾವು ಸಮಷ್ಠಿಯಾಗಿ, ಸೃಜನಶೀಲತೆಯಿಂದ ಮಾಡಿದ್ದ ಪ್ರಯತ್ನವೇ ಈಗ ಅಸ್ತವ್ಯಸ್ತಗೊಂಡಿದೆ ಎಂಬುದು ನಮ್ಮ ಅಭಿಪ್ರಾಯ’ ಎಂದು ಹೇಳಿದ್ದಾರೆ.

“ವಿಸ್ಕೃತ ಚರ್ಚೆ ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು, ಚಿಂತಕರು, ಭಿನ್ನ ಸಿದ್ಧಾಂತಗಳ ಹಿನ್ನೆಲೆಯುಳ್ಳವರು, ಸ್ವಾತಂತ್ರ್ಯ ಹೋರಾಟ, ಸಂವಿಧಾನ ಚೌಕಟ್ಟು, ಪ್ರಜಾಪ್ರಭುತ್ವದ ಕಾರ್ಯವಿಧಾನ, ಭಾರತ ರಾಜಕಾರಣದ ಪ್ರಮುಖಾಂಶಗಳು, ಜಾಗತಿಕ ವಿದ್ಯಮಾನಗಳು ಕುರಿತ ಅರಿವನ್ನು ಹಂಚಿಕೊಂಡಿದ್ದವರ ಜೊತೆಗೆ, ಸಮಾಲೋಚನೆ ನಡೆಸಿದ್ದರ ಫಲವಾಗಿ ಈ ಪಠ್ಯಪುಸ್ತಕಗಳು ರಚನೆಯಾಗಿದ್ದವು’ ಎಂದು ಹೇಳಿದ್ದಾರೆ.

ಕಳೆದ ವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದ ಯೋಗೇಂದ್ರ ಯಾದವ್ ಮತ್ತು ಫಾಲ್‌ಸಿಕರ್ ಅವರು, `ಪಠ್ಯ ಪರಿಷ್ಕರಣೆ ಕಸರತ್ತು ಪುಸ್ತಕಗಳನ್ನು ಗುರುತಿಸಲಾಗದಂತೆ ಮಾಡಿದೆ. ನಮಗೆ ಹೆಮ್ಮೆ ಎನಿಸುತ್ತಿದ್ದ ಪಠ್ಯಪುಸ್ತಕಗಳು ಈಗ ಇರಿಸುಮುರಿಸು ಮೂಡಿಸುತ್ತಿವೆ’ ಎಂದು ಹೇಳಿದ್ದರು.

ಆದರೆ, ‘ಪಠ್ಯಪುಸ್ತಕದ ಜೊತೆಗೆ ಗುರುತಿಸಲಾದ ಹೆಸರು ಕೈಬಿಡುವ ಪ್ರಶ್ನೆ ಇಲ್ಲ. ಪಠ್ಯಪುಸ್ತಕಗಳನ್ನು ಆ ವಿಷಯದ ಜ್ಞಾನ, ಅರಿವು ಆಧರಿಸಿ ರೂಪಿಸಲಾಗುತ್ತದೆ. ಯಾವುದೇ ಹಂತದಲ್ಲಿ ವ್ಯಕ್ತಿಗತವಾಗಿ ಒಬ್ಬರು ಕರ್ತೃ ಎಂದು ಹೇಳಿಕೊಳ್ಳಲಾಗದು’ ಎಂದು ಎನ್‌ಸಿಇಆರ್‌ಟಿ ಹೇಳಿದೆ.

ಕಳೆದ ತಿಂಗಳು ಕೆಲವು ಪಠ್ಯಗಳನ್ನು ಪುಸ್ತಕಗಳಿಂದ ಕೈಬಿಟ್ಟಿದ್ದ ಎನ್‌ಸಿಇಆರ್‌ಟಿ ಕ್ರಮ ವಿವಾದಕ್ಕೆ ಆಸ್ಪದವಾಗಿತ್ತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತೀಕಾರ ಮನೋಭಾವದಿಂದ ಈ ಕಸರತ್ತಿಗೆ ಕೈಹಾಕಿದೆ ಎಂದು ವಿರೋಧ ಪಕ್ಷಗಳು ತೀವ್ರ ತರಾಟೆ ತೆಗೆದುಕೊಂಡಿದ್ದವು.

ಆದರೆ, ಕೆಲ ಪಠ್ಯಗಳನ್ನು ಕಣ್ಣಪ್ಪಿನಿಂದ ಕೈಬಿಟ್ಟಿರುವ ಸಾಧ್ಯತೆ ಇದೆ ಎಂದು ಎನ್‌ಸಿಇಆರ್‌ಟಿ ನಂತರ ಹೇಳಿದ್ದರೂ, ತಜ್ಞರ ಸಮಿತಿಯ ಶಿಫಾರಸು ಆಧರಿಸಿ ಇದನ್ನು ಮಾಡಲಾಗಿದೆ ಎಂದು ಸಮರ್ಥಿಸಿಕೊಳ್ಳುವ ಮೂಲಕ ಕೈಬಿಟ್ಟಿದ್ದ ಪಠ್ಯ ಮರುಸೇರಿಸಲು ನಿರಾಕರಿಸಿತ್ತು.

andolanait

Recent Posts

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

1 hour ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

1 hour ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

2 hours ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

2 hours ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

2 hours ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

2 hours ago