BREAKING NEWS

ಪಠ್ಯ ಪುಸ್ತಕಗಳಿಂದ ನಮ್ಮ ಹೆಸರು ಕೈಬಿಡಿ: ಎನ್‌ಸಿಇಆರ್‌ಟಿಗೆ 33 ಶೀಕ್ಷಣ ತಜ್ಞರ ಪತ್ರ

ನವದೆಹಲಿ: ಸಮಷ್ಟಿಯಾಗಿ ಸೃಜನಶೀಲತೆಯಿಂದ ರೂಪಿಸಿದ್ದ ಪಠ್ಯಪುಸ್ತಕಗಳ ಸ್ವರೂಪವೇ ಬದಲಾಗಿದೆ. ಹೀಗಾಗಿ ನಮ್ಮ ಹೆಸರುಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡಬೇಕು ಎಂದು 33 ಮಂದಿ ಶಿಕ್ಷಣ ತಜ್ಞರು ಗುರುವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದಾರೆ.

ರಾಜಕೀಯ ಚಿಂತಕರಾದ ಯೋಗೇಂದ್ರ ಯಾದವ್‌ ಮತ್ತು ಸುಹಾಸ್‌ ಫಾಲ್‌ಸಿಕರ್‌ ಅವರು ಇಂತಹುದೇ ಬೇಡಿಕೆಯನ್ನು ಈಗಾಗಲೇ ಇಟ್ಟಿದ್ದಾರೆ. ಈ ಎಲ್ಲರೂ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯ(ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ರಚನಾ ಸಮಿತಿ ಭಾಗವಾಗಿದ್ದರು.

ಹೆಸರು ಕೈಬಿಡಲು ಕೋರಿ ಎನ್‌ಇಆರ್‌ಟಿ ನಿರ್ದೇಶಕ ದಿನೇಶ್ ಸಕ್ತಾನಿ ಅವರಿಗೆ ಪತ್ರ ಬರೆದಿರುವ ಪ್ರಮುಖರು: ಜೆಎನ್‌ಯು ಮಾಜಿ ಪ್ರೊಫೆಸರ್ ಕಾಂತಿ ಪ್ರಸಾದ್‌ ಬಾಜಪೇಯಿ, ಅಶೋಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರತಾಪ್ ಭಾನು ಮೆಹ್ರಾ, ಸಿಎಸ್‌ಡಿಎಸ್‌ನ ಮಾಜಿ ನಿರ್ದೇಶಕ ರಾಜೀವ್ ಭಾರ್ಗವ, ಜೆಎನ್‌ಯು ಮಾಜಿ ಪ್ರೊಫೆಸರ್ ನೀರಜಾ ಗೋಪಾಲ್ ಜಯಲ್, ಜೆಎನ್‌ಯು ಪ್ರೊಫೆಸರ್ ನಿವೇದಿತಾ ಮೆನನ್, ಸಿವಿಲ್ ಸೊಸೈಟಿ ವಾಚ್‌ಡಾಗ್ ಕಾಮನ್‌ ಕಾಸ್‌ ಸಂಸ್ಥೆಯ ಮುಖ್ಯಸ್ಥ ವಿಪುಲ್ ಮುದ್ದಲ್, ಹೈದರಾಬಾದ್ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಕೆ.ಸಿ.ಸೂರಿ, ಭಾರತೀಯ ಅಧ್ಯಯನ ಸಂಸ್ಥೆಯ ಮಾಜಿ ನಿರ್ದೇಶಕ ಪೀಟರ್ ರೊನಾಲ್ಡ್ ಡಿಸೋಜ.

‘ಮೂಲ ಪಠ್ಯಪುಸ್ತಕ ಸಾಕಷ್ಟು ಪರಿಷ್ಕರಣೆಗೊಂಡಿದೆ. ಈಗ ವಿಭಿನ್ನ ಪಠ್ಯಪುಸ್ತಕವಾಗಿಯೇ ರೂಪುಗೊಂಡಿದೆ. ಇದನ್ನು ನಾವು ರೂಪಿಸಿದ್ದು ಎಂದು ಹೇಳಿಕೊಳ್ಳುವುದೂ ಕಷ್ಟವಾಗುತ್ತದೆ. ಈ ಕಾರಣದಿಂದ ಪಠ್ಯಪುಸ್ತಕಗಳಿಂದ ನಮ್ಮಹೆಸರು ಕೈಬಿಡಬೇಕು. ನಾವು ಸಮಷ್ಠಿಯಾಗಿ, ಸೃಜನಶೀಲತೆಯಿಂದ ಮಾಡಿದ್ದ ಪ್ರಯತ್ನವೇ ಈಗ ಅಸ್ತವ್ಯಸ್ತಗೊಂಡಿದೆ ಎಂಬುದು ನಮ್ಮ ಅಭಿಪ್ರಾಯ’ ಎಂದು ಹೇಳಿದ್ದಾರೆ.

“ವಿಸ್ಕೃತ ಚರ್ಚೆ ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು, ಚಿಂತಕರು, ಭಿನ್ನ ಸಿದ್ಧಾಂತಗಳ ಹಿನ್ನೆಲೆಯುಳ್ಳವರು, ಸ್ವಾತಂತ್ರ್ಯ ಹೋರಾಟ, ಸಂವಿಧಾನ ಚೌಕಟ್ಟು, ಪ್ರಜಾಪ್ರಭುತ್ವದ ಕಾರ್ಯವಿಧಾನ, ಭಾರತ ರಾಜಕಾರಣದ ಪ್ರಮುಖಾಂಶಗಳು, ಜಾಗತಿಕ ವಿದ್ಯಮಾನಗಳು ಕುರಿತ ಅರಿವನ್ನು ಹಂಚಿಕೊಂಡಿದ್ದವರ ಜೊತೆಗೆ, ಸಮಾಲೋಚನೆ ನಡೆಸಿದ್ದರ ಫಲವಾಗಿ ಈ ಪಠ್ಯಪುಸ್ತಕಗಳು ರಚನೆಯಾಗಿದ್ದವು’ ಎಂದು ಹೇಳಿದ್ದಾರೆ.

ಕಳೆದ ವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದ ಯೋಗೇಂದ್ರ ಯಾದವ್ ಮತ್ತು ಫಾಲ್‌ಸಿಕರ್ ಅವರು, `ಪಠ್ಯ ಪರಿಷ್ಕರಣೆ ಕಸರತ್ತು ಪುಸ್ತಕಗಳನ್ನು ಗುರುತಿಸಲಾಗದಂತೆ ಮಾಡಿದೆ. ನಮಗೆ ಹೆಮ್ಮೆ ಎನಿಸುತ್ತಿದ್ದ ಪಠ್ಯಪುಸ್ತಕಗಳು ಈಗ ಇರಿಸುಮುರಿಸು ಮೂಡಿಸುತ್ತಿವೆ’ ಎಂದು ಹೇಳಿದ್ದರು.

ಆದರೆ, ‘ಪಠ್ಯಪುಸ್ತಕದ ಜೊತೆಗೆ ಗುರುತಿಸಲಾದ ಹೆಸರು ಕೈಬಿಡುವ ಪ್ರಶ್ನೆ ಇಲ್ಲ. ಪಠ್ಯಪುಸ್ತಕಗಳನ್ನು ಆ ವಿಷಯದ ಜ್ಞಾನ, ಅರಿವು ಆಧರಿಸಿ ರೂಪಿಸಲಾಗುತ್ತದೆ. ಯಾವುದೇ ಹಂತದಲ್ಲಿ ವ್ಯಕ್ತಿಗತವಾಗಿ ಒಬ್ಬರು ಕರ್ತೃ ಎಂದು ಹೇಳಿಕೊಳ್ಳಲಾಗದು’ ಎಂದು ಎನ್‌ಸಿಇಆರ್‌ಟಿ ಹೇಳಿದೆ.

ಕಳೆದ ತಿಂಗಳು ಕೆಲವು ಪಠ್ಯಗಳನ್ನು ಪುಸ್ತಕಗಳಿಂದ ಕೈಬಿಟ್ಟಿದ್ದ ಎನ್‌ಸಿಇಆರ್‌ಟಿ ಕ್ರಮ ವಿವಾದಕ್ಕೆ ಆಸ್ಪದವಾಗಿತ್ತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತೀಕಾರ ಮನೋಭಾವದಿಂದ ಈ ಕಸರತ್ತಿಗೆ ಕೈಹಾಕಿದೆ ಎಂದು ವಿರೋಧ ಪಕ್ಷಗಳು ತೀವ್ರ ತರಾಟೆ ತೆಗೆದುಕೊಂಡಿದ್ದವು.

ಆದರೆ, ಕೆಲ ಪಠ್ಯಗಳನ್ನು ಕಣ್ಣಪ್ಪಿನಿಂದ ಕೈಬಿಟ್ಟಿರುವ ಸಾಧ್ಯತೆ ಇದೆ ಎಂದು ಎನ್‌ಸಿಇಆರ್‌ಟಿ ನಂತರ ಹೇಳಿದ್ದರೂ, ತಜ್ಞರ ಸಮಿತಿಯ ಶಿಫಾರಸು ಆಧರಿಸಿ ಇದನ್ನು ಮಾಡಲಾಗಿದೆ ಎಂದು ಸಮರ್ಥಿಸಿಕೊಳ್ಳುವ ಮೂಲಕ ಕೈಬಿಟ್ಟಿದ್ದ ಪಠ್ಯ ಮರುಸೇರಿಸಲು ನಿರಾಕರಿಸಿತ್ತು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago