BREAKING NEWS

ಪಠ್ಯ ಪುಸ್ತಕಗಳಿಂದ ನಮ್ಮ ಹೆಸರು ಕೈಬಿಡಿ: ಎನ್‌ಸಿಇಆರ್‌ಟಿಗೆ 33 ಶೀಕ್ಷಣ ತಜ್ಞರ ಪತ್ರ

ನವದೆಹಲಿ: ಸಮಷ್ಟಿಯಾಗಿ ಸೃಜನಶೀಲತೆಯಿಂದ ರೂಪಿಸಿದ್ದ ಪಠ್ಯಪುಸ್ತಕಗಳ ಸ್ವರೂಪವೇ ಬದಲಾಗಿದೆ. ಹೀಗಾಗಿ ನಮ್ಮ ಹೆಸರುಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡಬೇಕು ಎಂದು 33 ಮಂದಿ ಶಿಕ್ಷಣ ತಜ್ಞರು ಗುರುವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದಾರೆ.

ರಾಜಕೀಯ ಚಿಂತಕರಾದ ಯೋಗೇಂದ್ರ ಯಾದವ್‌ ಮತ್ತು ಸುಹಾಸ್‌ ಫಾಲ್‌ಸಿಕರ್‌ ಅವರು ಇಂತಹುದೇ ಬೇಡಿಕೆಯನ್ನು ಈಗಾಗಲೇ ಇಟ್ಟಿದ್ದಾರೆ. ಈ ಎಲ್ಲರೂ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯ(ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ರಚನಾ ಸಮಿತಿ ಭಾಗವಾಗಿದ್ದರು.

ಹೆಸರು ಕೈಬಿಡಲು ಕೋರಿ ಎನ್‌ಇಆರ್‌ಟಿ ನಿರ್ದೇಶಕ ದಿನೇಶ್ ಸಕ್ತಾನಿ ಅವರಿಗೆ ಪತ್ರ ಬರೆದಿರುವ ಪ್ರಮುಖರು: ಜೆಎನ್‌ಯು ಮಾಜಿ ಪ್ರೊಫೆಸರ್ ಕಾಂತಿ ಪ್ರಸಾದ್‌ ಬಾಜಪೇಯಿ, ಅಶೋಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರತಾಪ್ ಭಾನು ಮೆಹ್ರಾ, ಸಿಎಸ್‌ಡಿಎಸ್‌ನ ಮಾಜಿ ನಿರ್ದೇಶಕ ರಾಜೀವ್ ಭಾರ್ಗವ, ಜೆಎನ್‌ಯು ಮಾಜಿ ಪ್ರೊಫೆಸರ್ ನೀರಜಾ ಗೋಪಾಲ್ ಜಯಲ್, ಜೆಎನ್‌ಯು ಪ್ರೊಫೆಸರ್ ನಿವೇದಿತಾ ಮೆನನ್, ಸಿವಿಲ್ ಸೊಸೈಟಿ ವಾಚ್‌ಡಾಗ್ ಕಾಮನ್‌ ಕಾಸ್‌ ಸಂಸ್ಥೆಯ ಮುಖ್ಯಸ್ಥ ವಿಪುಲ್ ಮುದ್ದಲ್, ಹೈದರಾಬಾದ್ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಕೆ.ಸಿ.ಸೂರಿ, ಭಾರತೀಯ ಅಧ್ಯಯನ ಸಂಸ್ಥೆಯ ಮಾಜಿ ನಿರ್ದೇಶಕ ಪೀಟರ್ ರೊನಾಲ್ಡ್ ಡಿಸೋಜ.

‘ಮೂಲ ಪಠ್ಯಪುಸ್ತಕ ಸಾಕಷ್ಟು ಪರಿಷ್ಕರಣೆಗೊಂಡಿದೆ. ಈಗ ವಿಭಿನ್ನ ಪಠ್ಯಪುಸ್ತಕವಾಗಿಯೇ ರೂಪುಗೊಂಡಿದೆ. ಇದನ್ನು ನಾವು ರೂಪಿಸಿದ್ದು ಎಂದು ಹೇಳಿಕೊಳ್ಳುವುದೂ ಕಷ್ಟವಾಗುತ್ತದೆ. ಈ ಕಾರಣದಿಂದ ಪಠ್ಯಪುಸ್ತಕಗಳಿಂದ ನಮ್ಮಹೆಸರು ಕೈಬಿಡಬೇಕು. ನಾವು ಸಮಷ್ಠಿಯಾಗಿ, ಸೃಜನಶೀಲತೆಯಿಂದ ಮಾಡಿದ್ದ ಪ್ರಯತ್ನವೇ ಈಗ ಅಸ್ತವ್ಯಸ್ತಗೊಂಡಿದೆ ಎಂಬುದು ನಮ್ಮ ಅಭಿಪ್ರಾಯ’ ಎಂದು ಹೇಳಿದ್ದಾರೆ.

“ವಿಸ್ಕೃತ ಚರ್ಚೆ ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು, ಚಿಂತಕರು, ಭಿನ್ನ ಸಿದ್ಧಾಂತಗಳ ಹಿನ್ನೆಲೆಯುಳ್ಳವರು, ಸ್ವಾತಂತ್ರ್ಯ ಹೋರಾಟ, ಸಂವಿಧಾನ ಚೌಕಟ್ಟು, ಪ್ರಜಾಪ್ರಭುತ್ವದ ಕಾರ್ಯವಿಧಾನ, ಭಾರತ ರಾಜಕಾರಣದ ಪ್ರಮುಖಾಂಶಗಳು, ಜಾಗತಿಕ ವಿದ್ಯಮಾನಗಳು ಕುರಿತ ಅರಿವನ್ನು ಹಂಚಿಕೊಂಡಿದ್ದವರ ಜೊತೆಗೆ, ಸಮಾಲೋಚನೆ ನಡೆಸಿದ್ದರ ಫಲವಾಗಿ ಈ ಪಠ್ಯಪುಸ್ತಕಗಳು ರಚನೆಯಾಗಿದ್ದವು’ ಎಂದು ಹೇಳಿದ್ದಾರೆ.

ಕಳೆದ ವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದ ಯೋಗೇಂದ್ರ ಯಾದವ್ ಮತ್ತು ಫಾಲ್‌ಸಿಕರ್ ಅವರು, `ಪಠ್ಯ ಪರಿಷ್ಕರಣೆ ಕಸರತ್ತು ಪುಸ್ತಕಗಳನ್ನು ಗುರುತಿಸಲಾಗದಂತೆ ಮಾಡಿದೆ. ನಮಗೆ ಹೆಮ್ಮೆ ಎನಿಸುತ್ತಿದ್ದ ಪಠ್ಯಪುಸ್ತಕಗಳು ಈಗ ಇರಿಸುಮುರಿಸು ಮೂಡಿಸುತ್ತಿವೆ’ ಎಂದು ಹೇಳಿದ್ದರು.

ಆದರೆ, ‘ಪಠ್ಯಪುಸ್ತಕದ ಜೊತೆಗೆ ಗುರುತಿಸಲಾದ ಹೆಸರು ಕೈಬಿಡುವ ಪ್ರಶ್ನೆ ಇಲ್ಲ. ಪಠ್ಯಪುಸ್ತಕಗಳನ್ನು ಆ ವಿಷಯದ ಜ್ಞಾನ, ಅರಿವು ಆಧರಿಸಿ ರೂಪಿಸಲಾಗುತ್ತದೆ. ಯಾವುದೇ ಹಂತದಲ್ಲಿ ವ್ಯಕ್ತಿಗತವಾಗಿ ಒಬ್ಬರು ಕರ್ತೃ ಎಂದು ಹೇಳಿಕೊಳ್ಳಲಾಗದು’ ಎಂದು ಎನ್‌ಸಿಇಆರ್‌ಟಿ ಹೇಳಿದೆ.

ಕಳೆದ ತಿಂಗಳು ಕೆಲವು ಪಠ್ಯಗಳನ್ನು ಪುಸ್ತಕಗಳಿಂದ ಕೈಬಿಟ್ಟಿದ್ದ ಎನ್‌ಸಿಇಆರ್‌ಟಿ ಕ್ರಮ ವಿವಾದಕ್ಕೆ ಆಸ್ಪದವಾಗಿತ್ತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತೀಕಾರ ಮನೋಭಾವದಿಂದ ಈ ಕಸರತ್ತಿಗೆ ಕೈಹಾಕಿದೆ ಎಂದು ವಿರೋಧ ಪಕ್ಷಗಳು ತೀವ್ರ ತರಾಟೆ ತೆಗೆದುಕೊಂಡಿದ್ದವು.

ಆದರೆ, ಕೆಲ ಪಠ್ಯಗಳನ್ನು ಕಣ್ಣಪ್ಪಿನಿಂದ ಕೈಬಿಟ್ಟಿರುವ ಸಾಧ್ಯತೆ ಇದೆ ಎಂದು ಎನ್‌ಸಿಇಆರ್‌ಟಿ ನಂತರ ಹೇಳಿದ್ದರೂ, ತಜ್ಞರ ಸಮಿತಿಯ ಶಿಫಾರಸು ಆಧರಿಸಿ ಇದನ್ನು ಮಾಡಲಾಗಿದೆ ಎಂದು ಸಮರ್ಥಿಸಿಕೊಳ್ಳುವ ಮೂಲಕ ಕೈಬಿಟ್ಟಿದ್ದ ಪಠ್ಯ ಮರುಸೇರಿಸಲು ನಿರಾಕರಿಸಿತ್ತು.

andolanait

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

3 hours ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

3 hours ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

3 hours ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

3 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

3 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

11 hours ago