BREAKING NEWS

ಸೆಪ್ಟೆಂಬರ್‌ನಲ್ಲಿ ಬರ ಪ್ರದೇಶಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು: ಚೆಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಸನ್ನಿವೇಶ ಪರಿಸ್ಥಿತಿ ಇದ್ದು, ವಾಸ್ತವಿಕ ಅಧ್ಯಯನದ ಬಳಿಕ ಮುಂದಿನ ತಿಂಗಳ ಮೊದಲ ವಾರದಲ್ಲಿ ಬರ ಪ್ರದೇಶಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶೇ. 79 ರಷ್ಟು ಬಿತ್ತನೆಯಾಗಿದೆ. ಆದರೆ ಮಳೆ ಕೊರತೆಯಿಂದಾಗಿ ಅದು ಒಣಗಿ ಹೋಗುತ್ತಿದ್ದು, ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆಗಸ್ಟ್ ತಿಂಗಳಿನಲ್ಲಿ ತಕ್ಷಣವೇ ಮಳೆ ಬಂದರೆ ಶೇ. 50 ರಿಂದ 60 ರಷ್ಟು ಭಾಗ ಉಳಿಸಿಕೊಳ್ಳಬಹುದು. ಹವಾಮಾನ ಮುನ್ಸೂಚನೆ ಪ್ರಕಾರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆಯ ಅನಿಶ್ಚಿತತೆ ಇದೆ. ಹೀಗಾಗಿ ಬಿತ್ತನೆ ಮಾಡಿದ ಬೆಳೆ ಕೈಗೆ ಬರುವ ನಿರೀಕ್ಷೆಗಳಿಲ್ಲ ಎಂದರು.

4 ಲಕ್ಷ ಹೆಕ್ಟೇರಿನಲ್ಲಿ ಭತ್ತ ಬಿತ್ತನೆಯ ಕೊರತೆಯಾಗಿದೆ. ಇದರಲ್ಲಿ 2 ರಿಂದ 3 ಲಕ್ಷ ಹೆಕ್ಟೇರಿನಲ್ಲಿ ಬಿತ್ತನೆಯಾಗುವ ಸಾಧ್ಯತೆಯಿದೆ. ಸದ್ಯಕ್ಕೆ ಈವರೆಗಿನ ಮಾಹಿತಿ ಪ್ರಕಾರ ತೊಗರಿ ಎರಡೂವರೆ ಲಕ್ಷ ಹೆಕ್ಟೇರಿನಲ್ಲಿ, ಹೆಸರುಕಾಳು 2.22 ಲಕ್ಷ ಹೆಕ್ಟೇರಿನಲ್ಲಿ, ಹತ್ತಿ 1.43 ಲಕ್ಷ ಹೆಕ್ಟೇರ್, ಶೇಂಗಾ 93 ಸಾವಿರ ಹೆಕ್ಟೇರ್, ಸೂರ್ಯಕಾಂತಿ 71 ಸಾವಿರ ಹೆಕ್ಟೇರಿನಲ್ಲಿ ಬಿತ್ತನೆಯಾಗದೆ ಕೊರತೆಯುಂಟಾಗಿದೆ.

ರಾಗಿ, ಭತ್ತ, ಸೂರ್ಯಕಾಂತಿ ಬಿತ್ತನೆಗೆ ಇನ್ನೂ ಸಮಯಾವಕಾಶ ಇದೆ. ರಾಗಿ ಸೆಪ್ಟೆಂಬರ್ 15 ರವರೆಗೂ ಬಿತ್ತನೆ ಮಾಡಬಹುದಾಗಿದ್ದು, ಈವರೆಗಿನ 3.5 ಲಕ್ಷ ಹೆಕ್ಟೇರ್ ಕೊರತೆಯಲ್ಲಿ ಬಹಳಷ್ಟು ಪ್ರದೇಶ ಬಿತ್ತನೆಯಾಗುವ ಅಂದಾಜಿದೆ ಎಂದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಶೇ. 60 ರಷ್ಟು ಮಳೆ ಕೊರತೆಯಾಗಿರಬೇಕು. ಸತತ ಮೂರು ವಾರಗಳ ಕಾಲ ಒಣಹವೆ ಮುಂದುವರೆದಿರಬೇಕು. ಶೇ. 75 ಕ್ಕಿಂತ ಕಡಿಮೆ ಪ್ರದೇಶದಲ್ಲಿ ಬಿತ್ತನೆಯಾಗಿರುವುದು, ಮಣ್ಣಿನಲ್ಲಿ ಶೇ.50ಕ್ಕಿಂತ ಕಡಿಮೆ ತೇವಾಂಶ ಇರುವುದು, ಜಲಾಶಯಗಳಲ್ಲಿ ನೀರಿನ ಮಟ್ಟ ಆಧರಿಸಿ ಬರ ಘೋಷಣೆ ಮಾಡಬೇಕಿದೆ. ಇದರ ಅಧ್ಯಯನಕ್ಕಾಗಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿ ಮೊದಲ ಸುತ್ತಿನ ಸಭೆ ನಡೆಸಿದೆ ಎಂದು ಹೇಳಿದರು.

ಶೇ. 60 ರಷ್ಟು ಮಳೆ ಕೊರತೆಯ ಮಾನದಂಡವನ್ನಷ್ಟೇ ಪರಿಗಣಿಸದೆ ಕ್ಷೇತ್ರ ಮಟ್ಟದಲ್ಲಿ ವಾಸ್ತವಿಕ ಅಧ್ಯಯನದ ಮೂಲಕ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಆಧಾರದ ಮೇಲೆ ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳ ಜಂಟಿ ಸಮಿತಿ ಪ್ರತಿ ತಾಲೂಕಿನಲ್ಲಿ ಕನಿಷ್ಟ 10 ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವಿಕ ಅಧ್ಯಯನ ನಡೆಸಿ ವರದು ಸಿದ್ಧಪಡಿಸಲಿದೆ. ಅದನ್ನು ಈ ತಿಂಗಳ 30ರೊಳಗಾಗಿ ಕೇಂದ್ರ ಸರ್ಕಾರಕ್ಕೆ ರವಾನೆ ಮಾಡಲಾಗುತ್ತಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಉಪಸಮಿತಿ ಸಭೆ ನಡೆಸಿ ಚರ್ಚೆ ನಡೆಸುವ ಮೂಲಕ ಬರ ಪರಿಸ್ಥಿತಿಯನ್ನು ಘೋಷಣೆ ಮಾಡುವುದಾಗಿ ಹೇಳಿದರು.

ಪ್ರಸಕ್ತ ಮುಂಗಾರಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣ ಒಣಗಿ ಹೋಗಿರುವುದರಿಂದಬಾಗಲಕೋಟೆ, ಗದಗ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಯ 194 ಗ್ರಾಮ ಪಂಚಾಯಿತಿಗಳಲ್ಲಿ 35,284 ರೈತರಿಗೆ 35.95 ಕೋಟಿ ರೂ. ಬೆಳೆವಿಮೆಯನ್ನು ಜೂನ್ 22 ರ ವೇಳೆಗೆ ಪಾವತಿ ಮಾಡಲಾಗಿದೆ. ದಾಖಲಾತಿಗಳ ಕೊರತೆ ಇರುವ ರೈತರಿಗೂ ವಿಮೆ ಪಾವತಿ ಮಾಡುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಪ್ರಧಾನಮಂತ್ರಿ ಪಸಲ್ ಭೀಮಾ ವಿಮೆಗಾಗಿ 16 ಲಕ್ಷ ನೋಂದಣಿಯಾಗಿದೆ. ಕಳೆದ ವರ್ಷ ಮಂಡ್ಯ ಜಿಲ್ಲೆ ಅತೀ ಹೆಚ್ಚು ವಿಮಾ ಸೌಲಭ್ಯವನ್ನು ರೈತರಿಗೆ ದೊರಕಿಸುವ ಮೂಲಕ ಕೇಂದ್ರ ಸರ್ಕಾರದಿಂದ ಪ್ರಶಂಸನಾ ಪತ್ರ ಪಡೆದುಕೊಂಡಿದೆ ಎಂದು ಹೇಳಿದರು.

ಸಿರಿಧಾನ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆ. 28 ರಂದು ಮಂಡ್ಯದಲ್ಲಿ ಸಿರಿಧಾನ್ಯ ಮೇಳ ವಸ್ತು ಪ್ರದರ್ಶನ ಮತ್ತು ಬೆಲ್ಲದ ಪರಿಶೆ ಹಾಗೂ ಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದರು. ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ಜಿಲ್ಲೆಯಲ್ಲೂ ಪ್ರವಾಸ ಮಾಡಿ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ವೇಳೆ ರೈತರು, ರೈತ ಉತ್ಪಾದಕ ಸಂಸ್ಥೆಗಳ ಪದಾಕಾರಿಗಳು, ರೈತ ಪ್ರತಿನಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

andolanait

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

2 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

2 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

2 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

3 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

3 hours ago