BREAKING NEWS

ಸೆಪ್ಟೆಂಬರ್‌ನಲ್ಲಿ ಬರ ಪ್ರದೇಶಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು: ಚೆಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಸನ್ನಿವೇಶ ಪರಿಸ್ಥಿತಿ ಇದ್ದು, ವಾಸ್ತವಿಕ ಅಧ್ಯಯನದ ಬಳಿಕ ಮುಂದಿನ ತಿಂಗಳ ಮೊದಲ ವಾರದಲ್ಲಿ ಬರ ಪ್ರದೇಶಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶೇ. 79 ರಷ್ಟು ಬಿತ್ತನೆಯಾಗಿದೆ. ಆದರೆ ಮಳೆ ಕೊರತೆಯಿಂದಾಗಿ ಅದು ಒಣಗಿ ಹೋಗುತ್ತಿದ್ದು, ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆಗಸ್ಟ್ ತಿಂಗಳಿನಲ್ಲಿ ತಕ್ಷಣವೇ ಮಳೆ ಬಂದರೆ ಶೇ. 50 ರಿಂದ 60 ರಷ್ಟು ಭಾಗ ಉಳಿಸಿಕೊಳ್ಳಬಹುದು. ಹವಾಮಾನ ಮುನ್ಸೂಚನೆ ಪ್ರಕಾರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆಯ ಅನಿಶ್ಚಿತತೆ ಇದೆ. ಹೀಗಾಗಿ ಬಿತ್ತನೆ ಮಾಡಿದ ಬೆಳೆ ಕೈಗೆ ಬರುವ ನಿರೀಕ್ಷೆಗಳಿಲ್ಲ ಎಂದರು.

4 ಲಕ್ಷ ಹೆಕ್ಟೇರಿನಲ್ಲಿ ಭತ್ತ ಬಿತ್ತನೆಯ ಕೊರತೆಯಾಗಿದೆ. ಇದರಲ್ಲಿ 2 ರಿಂದ 3 ಲಕ್ಷ ಹೆಕ್ಟೇರಿನಲ್ಲಿ ಬಿತ್ತನೆಯಾಗುವ ಸಾಧ್ಯತೆಯಿದೆ. ಸದ್ಯಕ್ಕೆ ಈವರೆಗಿನ ಮಾಹಿತಿ ಪ್ರಕಾರ ತೊಗರಿ ಎರಡೂವರೆ ಲಕ್ಷ ಹೆಕ್ಟೇರಿನಲ್ಲಿ, ಹೆಸರುಕಾಳು 2.22 ಲಕ್ಷ ಹೆಕ್ಟೇರಿನಲ್ಲಿ, ಹತ್ತಿ 1.43 ಲಕ್ಷ ಹೆಕ್ಟೇರ್, ಶೇಂಗಾ 93 ಸಾವಿರ ಹೆಕ್ಟೇರ್, ಸೂರ್ಯಕಾಂತಿ 71 ಸಾವಿರ ಹೆಕ್ಟೇರಿನಲ್ಲಿ ಬಿತ್ತನೆಯಾಗದೆ ಕೊರತೆಯುಂಟಾಗಿದೆ.

ರಾಗಿ, ಭತ್ತ, ಸೂರ್ಯಕಾಂತಿ ಬಿತ್ತನೆಗೆ ಇನ್ನೂ ಸಮಯಾವಕಾಶ ಇದೆ. ರಾಗಿ ಸೆಪ್ಟೆಂಬರ್ 15 ರವರೆಗೂ ಬಿತ್ತನೆ ಮಾಡಬಹುದಾಗಿದ್ದು, ಈವರೆಗಿನ 3.5 ಲಕ್ಷ ಹೆಕ್ಟೇರ್ ಕೊರತೆಯಲ್ಲಿ ಬಹಳಷ್ಟು ಪ್ರದೇಶ ಬಿತ್ತನೆಯಾಗುವ ಅಂದಾಜಿದೆ ಎಂದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಶೇ. 60 ರಷ್ಟು ಮಳೆ ಕೊರತೆಯಾಗಿರಬೇಕು. ಸತತ ಮೂರು ವಾರಗಳ ಕಾಲ ಒಣಹವೆ ಮುಂದುವರೆದಿರಬೇಕು. ಶೇ. 75 ಕ್ಕಿಂತ ಕಡಿಮೆ ಪ್ರದೇಶದಲ್ಲಿ ಬಿತ್ತನೆಯಾಗಿರುವುದು, ಮಣ್ಣಿನಲ್ಲಿ ಶೇ.50ಕ್ಕಿಂತ ಕಡಿಮೆ ತೇವಾಂಶ ಇರುವುದು, ಜಲಾಶಯಗಳಲ್ಲಿ ನೀರಿನ ಮಟ್ಟ ಆಧರಿಸಿ ಬರ ಘೋಷಣೆ ಮಾಡಬೇಕಿದೆ. ಇದರ ಅಧ್ಯಯನಕ್ಕಾಗಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿ ಮೊದಲ ಸುತ್ತಿನ ಸಭೆ ನಡೆಸಿದೆ ಎಂದು ಹೇಳಿದರು.

ಶೇ. 60 ರಷ್ಟು ಮಳೆ ಕೊರತೆಯ ಮಾನದಂಡವನ್ನಷ್ಟೇ ಪರಿಗಣಿಸದೆ ಕ್ಷೇತ್ರ ಮಟ್ಟದಲ್ಲಿ ವಾಸ್ತವಿಕ ಅಧ್ಯಯನದ ಮೂಲಕ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಆಧಾರದ ಮೇಲೆ ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳ ಜಂಟಿ ಸಮಿತಿ ಪ್ರತಿ ತಾಲೂಕಿನಲ್ಲಿ ಕನಿಷ್ಟ 10 ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವಿಕ ಅಧ್ಯಯನ ನಡೆಸಿ ವರದು ಸಿದ್ಧಪಡಿಸಲಿದೆ. ಅದನ್ನು ಈ ತಿಂಗಳ 30ರೊಳಗಾಗಿ ಕೇಂದ್ರ ಸರ್ಕಾರಕ್ಕೆ ರವಾನೆ ಮಾಡಲಾಗುತ್ತಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಉಪಸಮಿತಿ ಸಭೆ ನಡೆಸಿ ಚರ್ಚೆ ನಡೆಸುವ ಮೂಲಕ ಬರ ಪರಿಸ್ಥಿತಿಯನ್ನು ಘೋಷಣೆ ಮಾಡುವುದಾಗಿ ಹೇಳಿದರು.

ಪ್ರಸಕ್ತ ಮುಂಗಾರಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣ ಒಣಗಿ ಹೋಗಿರುವುದರಿಂದಬಾಗಲಕೋಟೆ, ಗದಗ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಯ 194 ಗ್ರಾಮ ಪಂಚಾಯಿತಿಗಳಲ್ಲಿ 35,284 ರೈತರಿಗೆ 35.95 ಕೋಟಿ ರೂ. ಬೆಳೆವಿಮೆಯನ್ನು ಜೂನ್ 22 ರ ವೇಳೆಗೆ ಪಾವತಿ ಮಾಡಲಾಗಿದೆ. ದಾಖಲಾತಿಗಳ ಕೊರತೆ ಇರುವ ರೈತರಿಗೂ ವಿಮೆ ಪಾವತಿ ಮಾಡುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಪ್ರಧಾನಮಂತ್ರಿ ಪಸಲ್ ಭೀಮಾ ವಿಮೆಗಾಗಿ 16 ಲಕ್ಷ ನೋಂದಣಿಯಾಗಿದೆ. ಕಳೆದ ವರ್ಷ ಮಂಡ್ಯ ಜಿಲ್ಲೆ ಅತೀ ಹೆಚ್ಚು ವಿಮಾ ಸೌಲಭ್ಯವನ್ನು ರೈತರಿಗೆ ದೊರಕಿಸುವ ಮೂಲಕ ಕೇಂದ್ರ ಸರ್ಕಾರದಿಂದ ಪ್ರಶಂಸನಾ ಪತ್ರ ಪಡೆದುಕೊಂಡಿದೆ ಎಂದು ಹೇಳಿದರು.

ಸಿರಿಧಾನ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆ. 28 ರಂದು ಮಂಡ್ಯದಲ್ಲಿ ಸಿರಿಧಾನ್ಯ ಮೇಳ ವಸ್ತು ಪ್ರದರ್ಶನ ಮತ್ತು ಬೆಲ್ಲದ ಪರಿಶೆ ಹಾಗೂ ಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದರು. ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ಜಿಲ್ಲೆಯಲ್ಲೂ ಪ್ರವಾಸ ಮಾಡಿ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ವೇಳೆ ರೈತರು, ರೈತ ಉತ್ಪಾದಕ ಸಂಸ್ಥೆಗಳ ಪದಾಕಾರಿಗಳು, ರೈತ ಪ್ರತಿನಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

andolanait

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

2 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

2 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

2 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

2 hours ago