BREAKING NEWS

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ವಕ್ಕರಿಸಿದೆ: ಬಿಜೆಪಿ

ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ ಚಿಂತೆ ಇಲ್ಲ. ಬಿತ್ತನೆ ಬೀಜ ದರ ನಿಗ್ರಹಕ್ಕೂ ಸರ್ಕಾರ ಒಪ್ಪುತ್ತಿಲ್ಲ, ಕೃಷಿ ಇಲಾಖೆಯ ಕರ್ಮಕಾಂಡಕ್ಕೆ ಕೊನೆಯಿಲ್ಲ, ರೈತರು ಬಿತ್ತಿದ ಬೀಜ ಮೊಳಕೆ ಒಡೆಯುತ್ತಿಲ್ಲ, ಆದರೂ ಸರ್ಕಾರದ ಕಲೆಕ್ಷನ್ ನಿಲ್ಲುತ್ತಿಲ್ಲ’ ಎಂದು ಟೀಕಿಸಿದೆ.

ರಾಜ್ಯದಲ್ಲಿ ಬರದ ಬೇಗೆಗೆ ಐವತ್ತಕ್ಕೂ ಹೆಚ್ಚು ತಾಲ್ಲೂಕುಗಳು ತತ್ತರಿಸಿವೆ. ಆದರೆ, ಸಿದ್ದರಾಮಯ್ಯ ಆಡಳಿತ ಉತ್ತರ ಹುಡುಕುತ್ತಿಲ್ಲ. ಮಳೆ ಇಲ್ಲದೆ ಜಲಾಶಯಗಳ ತುಂಬುತ್ತಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ಮಡಿಲು ಮಾತ್ರ ತುಂಬಿ ತುಳುಕುತ್ತಿದೆ. ಬರಗಾಲ ಬಂದರೂ ತಾನು ಮಾತ್ರ ಬೆಣ್ಣೆ ತಿನ್ನುತ್ತಿರುವ ಈ ಸರ್ಕಾರದ ಹಸಿವು ನೀಗುವವರೆಗೂ ರೈತನ ಉಸಿರಿಗಿಲ್ಲ ಗ್ಯಾರಂಟಿ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಹಿಂದೆಂದೂ ಕೇಳರಿಯದ ರೀತಿಯಲ್ಲಿ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಪ್ರವೇಶಕ್ಕೇ ನಿರ್ಬಂಧ ಇರಬೇಕಾದ ಕಲೆಕ್ಷನ್ ಏಜೆಂಟರಿಗೆ ಕರ್ನಾಟಕ ಕಾಂಗ್ರೆಸ್ ಕಚೇರಿಯಲ್ಲೇ ಕುರ್ಚಿ ಮಾತ್ರವಲ್ಲ, ಕೊಠಡಿಯೂ ನೀಡಿ ಸಾಕುತ್ತಿದೆ. ಖಾಲಿ ಹುದ್ದೆಗಳಿಗೆ ನೇಮಕಾತಿಗಳನ್ನೂ ಮಾಡದೆ‌ ಎಟಿಎಂ ಸರ್ಕಾರ ಲಂಚವನ್ನೇ ಅಧಿಕೃತಗೊಳಿಸುತ್ತಿದೆ.

ಎತ್ತ ಸಾಗುತ್ತಿದೆ ಕರ್ನಾಟಕ..?? ಗೂಂಡಾ ರೌಡಿಯೊಬ್ಬ ಸರ್ಕಾರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಬೇಕೆ..? ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ತ್ರಿವರ್ಣ ಧ್ವಜ ರಾರಾಜಿಸುವ ಬದಲು ಕರ್ನಾಟಕ ಕಾಂಗ್ರೆಸ್ ನ  ಧ್ವಜ ಮತ್ತು ಚಿಹ್ನೆ ಮೇಳೈಸಬೇಕೆ..? ಸ್ವಾತಂತ್ರ್ಯ ದಿನದಂತಹ ಪವಿತ್ರ ದಿನದಂದು, ಮಕ್ಕಳು & ಸಾರ್ವಜನಿಕರು ಗೂಂಡಾಗಳ ಭಾಷಣ ಕೇಳುವಂತಾಗಿರುವುದು ದುರಂತ ಎಂದು ಬಿಜೆಪಿ ಹೇಳಿದೆ.

andolanait

Recent Posts

ಹನೂರು: ಕಾಡಾನೆ ದಾಳಿಗೆ ಸಿಲುಕಿ ರೈತನ ಕಾಲು ಮುರಿತ

ಮಹಾದೇಶ್‌ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…

1 hour ago

ಮೊದಲು ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…

1 hour ago

ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…

2 hours ago

ಅರಣ್ಯ ಪ್ರದೇಶದ ಹೊರಗಡೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ…

2 hours ago

ಮೈಸೂರು ವಿವಿ 106ನೇ ಘಟಿಕೋತ್ಸವ ಸಂಭ್ರಮ: 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್‌ ಹಾಲ್‌ನಲ್ಲಿ ನೆರವೇರಿತು. ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ…

2 hours ago

ಬಳ್ಳಾರಿ ಗಲಾಟೆ ಪ್ರಕರಣ: ಮೃತ ರಾಜಶೇಖರ್‌ಗೆ 2 ಬಾರಿ ಮರಣೋತ್ತರ ಪರೀಕ್ಷೆ ಯಾಕೆ?: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…

2 hours ago