BREAKING NEWS

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ವಕ್ಕರಿಸಿದೆ: ಬಿಜೆಪಿ

ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ ಚಿಂತೆ ಇಲ್ಲ. ಬಿತ್ತನೆ ಬೀಜ ದರ ನಿಗ್ರಹಕ್ಕೂ ಸರ್ಕಾರ ಒಪ್ಪುತ್ತಿಲ್ಲ, ಕೃಷಿ ಇಲಾಖೆಯ ಕರ್ಮಕಾಂಡಕ್ಕೆ ಕೊನೆಯಿಲ್ಲ, ರೈತರು ಬಿತ್ತಿದ ಬೀಜ ಮೊಳಕೆ ಒಡೆಯುತ್ತಿಲ್ಲ, ಆದರೂ ಸರ್ಕಾರದ ಕಲೆಕ್ಷನ್ ನಿಲ್ಲುತ್ತಿಲ್ಲ’ ಎಂದು ಟೀಕಿಸಿದೆ.

ರಾಜ್ಯದಲ್ಲಿ ಬರದ ಬೇಗೆಗೆ ಐವತ್ತಕ್ಕೂ ಹೆಚ್ಚು ತಾಲ್ಲೂಕುಗಳು ತತ್ತರಿಸಿವೆ. ಆದರೆ, ಸಿದ್ದರಾಮಯ್ಯ ಆಡಳಿತ ಉತ್ತರ ಹುಡುಕುತ್ತಿಲ್ಲ. ಮಳೆ ಇಲ್ಲದೆ ಜಲಾಶಯಗಳ ತುಂಬುತ್ತಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ಮಡಿಲು ಮಾತ್ರ ತುಂಬಿ ತುಳುಕುತ್ತಿದೆ. ಬರಗಾಲ ಬಂದರೂ ತಾನು ಮಾತ್ರ ಬೆಣ್ಣೆ ತಿನ್ನುತ್ತಿರುವ ಈ ಸರ್ಕಾರದ ಹಸಿವು ನೀಗುವವರೆಗೂ ರೈತನ ಉಸಿರಿಗಿಲ್ಲ ಗ್ಯಾರಂಟಿ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಹಿಂದೆಂದೂ ಕೇಳರಿಯದ ರೀತಿಯಲ್ಲಿ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಪ್ರವೇಶಕ್ಕೇ ನಿರ್ಬಂಧ ಇರಬೇಕಾದ ಕಲೆಕ್ಷನ್ ಏಜೆಂಟರಿಗೆ ಕರ್ನಾಟಕ ಕಾಂಗ್ರೆಸ್ ಕಚೇರಿಯಲ್ಲೇ ಕುರ್ಚಿ ಮಾತ್ರವಲ್ಲ, ಕೊಠಡಿಯೂ ನೀಡಿ ಸಾಕುತ್ತಿದೆ. ಖಾಲಿ ಹುದ್ದೆಗಳಿಗೆ ನೇಮಕಾತಿಗಳನ್ನೂ ಮಾಡದೆ‌ ಎಟಿಎಂ ಸರ್ಕಾರ ಲಂಚವನ್ನೇ ಅಧಿಕೃತಗೊಳಿಸುತ್ತಿದೆ.

ಎತ್ತ ಸಾಗುತ್ತಿದೆ ಕರ್ನಾಟಕ..?? ಗೂಂಡಾ ರೌಡಿಯೊಬ್ಬ ಸರ್ಕಾರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಬೇಕೆ..? ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ತ್ರಿವರ್ಣ ಧ್ವಜ ರಾರಾಜಿಸುವ ಬದಲು ಕರ್ನಾಟಕ ಕಾಂಗ್ರೆಸ್ ನ  ಧ್ವಜ ಮತ್ತು ಚಿಹ್ನೆ ಮೇಳೈಸಬೇಕೆ..? ಸ್ವಾತಂತ್ರ್ಯ ದಿನದಂತಹ ಪವಿತ್ರ ದಿನದಂದು, ಮಕ್ಕಳು & ಸಾರ್ವಜನಿಕರು ಗೂಂಡಾಗಳ ಭಾಷಣ ಕೇಳುವಂತಾಗಿರುವುದು ದುರಂತ ಎಂದು ಬಿಜೆಪಿ ಹೇಳಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

34 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago