ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ ಚಿಂತೆ ಇಲ್ಲ. ಬಿತ್ತನೆ ಬೀಜ ದರ ನಿಗ್ರಹಕ್ಕೂ ಸರ್ಕಾರ ಒಪ್ಪುತ್ತಿಲ್ಲ, ಕೃಷಿ ಇಲಾಖೆಯ ಕರ್ಮಕಾಂಡಕ್ಕೆ ಕೊನೆಯಿಲ್ಲ, ರೈತರು ಬಿತ್ತಿದ ಬೀಜ ಮೊಳಕೆ ಒಡೆಯುತ್ತಿಲ್ಲ, ಆದರೂ ಸರ್ಕಾರದ ಕಲೆಕ್ಷನ್ ನಿಲ್ಲುತ್ತಿಲ್ಲ’ ಎಂದು ಟೀಕಿಸಿದೆ.
ರಾಜ್ಯದಲ್ಲಿ ಬರದ ಬೇಗೆಗೆ ಐವತ್ತಕ್ಕೂ ಹೆಚ್ಚು ತಾಲ್ಲೂಕುಗಳು ತತ್ತರಿಸಿವೆ. ಆದರೆ, ಸಿದ್ದರಾಮಯ್ಯ ಆಡಳಿತ ಉತ್ತರ ಹುಡುಕುತ್ತಿಲ್ಲ. ಮಳೆ ಇಲ್ಲದೆ ಜಲಾಶಯಗಳ ತುಂಬುತ್ತಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ಮಡಿಲು ಮಾತ್ರ ತುಂಬಿ ತುಳುಕುತ್ತಿದೆ. ಬರಗಾಲ ಬಂದರೂ ತಾನು ಮಾತ್ರ ಬೆಣ್ಣೆ ತಿನ್ನುತ್ತಿರುವ ಈ ಸರ್ಕಾರದ ಹಸಿವು ನೀಗುವವರೆಗೂ ರೈತನ ಉಸಿರಿಗಿಲ್ಲ ಗ್ಯಾರಂಟಿ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಹಿಂದೆಂದೂ ಕೇಳರಿಯದ ರೀತಿಯಲ್ಲಿ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಪ್ರವೇಶಕ್ಕೇ ನಿರ್ಬಂಧ ಇರಬೇಕಾದ ಕಲೆಕ್ಷನ್ ಏಜೆಂಟರಿಗೆ ಕರ್ನಾಟಕ ಕಾಂಗ್ರೆಸ್ ಕಚೇರಿಯಲ್ಲೇ ಕುರ್ಚಿ ಮಾತ್ರವಲ್ಲ, ಕೊಠಡಿಯೂ ನೀಡಿ ಸಾಕುತ್ತಿದೆ. ಖಾಲಿ ಹುದ್ದೆಗಳಿಗೆ ನೇಮಕಾತಿಗಳನ್ನೂ ಮಾಡದೆ ಎಟಿಎಂ ಸರ್ಕಾರ ಲಂಚವನ್ನೇ ಅಧಿಕೃತಗೊಳಿಸುತ್ತಿದೆ.
ಎತ್ತ ಸಾಗುತ್ತಿದೆ ಕರ್ನಾಟಕ..?? ಗೂಂಡಾ ರೌಡಿಯೊಬ್ಬ ಸರ್ಕಾರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಬೇಕೆ..? ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ತ್ರಿವರ್ಣ ಧ್ವಜ ರಾರಾಜಿಸುವ ಬದಲು ಕರ್ನಾಟಕ ಕಾಂಗ್ರೆಸ್ ನ ಧ್ವಜ ಮತ್ತು ಚಿಹ್ನೆ ಮೇಳೈಸಬೇಕೆ..? ಸ್ವಾತಂತ್ರ್ಯ ದಿನದಂತಹ ಪವಿತ್ರ ದಿನದಂದು, ಮಕ್ಕಳು & ಸಾರ್ವಜನಿಕರು ಗೂಂಡಾಗಳ ಭಾಷಣ ಕೇಳುವಂತಾಗಿರುವುದು ದುರಂತ ಎಂದು ಬಿಜೆಪಿ ಹೇಳಿದೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…