BREAKING NEWS

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ವಕ್ಕರಿಸಿದೆ: ಬಿಜೆಪಿ

ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ ಚಿಂತೆ ಇಲ್ಲ. ಬಿತ್ತನೆ ಬೀಜ ದರ ನಿಗ್ರಹಕ್ಕೂ ಸರ್ಕಾರ ಒಪ್ಪುತ್ತಿಲ್ಲ, ಕೃಷಿ ಇಲಾಖೆಯ ಕರ್ಮಕಾಂಡಕ್ಕೆ ಕೊನೆಯಿಲ್ಲ, ರೈತರು ಬಿತ್ತಿದ ಬೀಜ ಮೊಳಕೆ ಒಡೆಯುತ್ತಿಲ್ಲ, ಆದರೂ ಸರ್ಕಾರದ ಕಲೆಕ್ಷನ್ ನಿಲ್ಲುತ್ತಿಲ್ಲ’ ಎಂದು ಟೀಕಿಸಿದೆ.

ರಾಜ್ಯದಲ್ಲಿ ಬರದ ಬೇಗೆಗೆ ಐವತ್ತಕ್ಕೂ ಹೆಚ್ಚು ತಾಲ್ಲೂಕುಗಳು ತತ್ತರಿಸಿವೆ. ಆದರೆ, ಸಿದ್ದರಾಮಯ್ಯ ಆಡಳಿತ ಉತ್ತರ ಹುಡುಕುತ್ತಿಲ್ಲ. ಮಳೆ ಇಲ್ಲದೆ ಜಲಾಶಯಗಳ ತುಂಬುತ್ತಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ಮಡಿಲು ಮಾತ್ರ ತುಂಬಿ ತುಳುಕುತ್ತಿದೆ. ಬರಗಾಲ ಬಂದರೂ ತಾನು ಮಾತ್ರ ಬೆಣ್ಣೆ ತಿನ್ನುತ್ತಿರುವ ಈ ಸರ್ಕಾರದ ಹಸಿವು ನೀಗುವವರೆಗೂ ರೈತನ ಉಸಿರಿಗಿಲ್ಲ ಗ್ಯಾರಂಟಿ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಹಿಂದೆಂದೂ ಕೇಳರಿಯದ ರೀತಿಯಲ್ಲಿ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಪ್ರವೇಶಕ್ಕೇ ನಿರ್ಬಂಧ ಇರಬೇಕಾದ ಕಲೆಕ್ಷನ್ ಏಜೆಂಟರಿಗೆ ಕರ್ನಾಟಕ ಕಾಂಗ್ರೆಸ್ ಕಚೇರಿಯಲ್ಲೇ ಕುರ್ಚಿ ಮಾತ್ರವಲ್ಲ, ಕೊಠಡಿಯೂ ನೀಡಿ ಸಾಕುತ್ತಿದೆ. ಖಾಲಿ ಹುದ್ದೆಗಳಿಗೆ ನೇಮಕಾತಿಗಳನ್ನೂ ಮಾಡದೆ‌ ಎಟಿಎಂ ಸರ್ಕಾರ ಲಂಚವನ್ನೇ ಅಧಿಕೃತಗೊಳಿಸುತ್ತಿದೆ.

ಎತ್ತ ಸಾಗುತ್ತಿದೆ ಕರ್ನಾಟಕ..?? ಗೂಂಡಾ ರೌಡಿಯೊಬ್ಬ ಸರ್ಕಾರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಬೇಕೆ..? ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ತ್ರಿವರ್ಣ ಧ್ವಜ ರಾರಾಜಿಸುವ ಬದಲು ಕರ್ನಾಟಕ ಕಾಂಗ್ರೆಸ್ ನ  ಧ್ವಜ ಮತ್ತು ಚಿಹ್ನೆ ಮೇಳೈಸಬೇಕೆ..? ಸ್ವಾತಂತ್ರ್ಯ ದಿನದಂತಹ ಪವಿತ್ರ ದಿನದಂದು, ಮಕ್ಕಳು & ಸಾರ್ವಜನಿಕರು ಗೂಂಡಾಗಳ ಭಾಷಣ ಕೇಳುವಂತಾಗಿರುವುದು ದುರಂತ ಎಂದು ಬಿಜೆಪಿ ಹೇಳಿದೆ.

andolanait

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

4 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

7 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

7 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

8 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

12 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

12 hours ago