ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ ಚಿಂತೆ ಇಲ್ಲ. ಬಿತ್ತನೆ ಬೀಜ ದರ ನಿಗ್ರಹಕ್ಕೂ ಸರ್ಕಾರ ಒಪ್ಪುತ್ತಿಲ್ಲ, ಕೃಷಿ ಇಲಾಖೆಯ ಕರ್ಮಕಾಂಡಕ್ಕೆ ಕೊನೆಯಿಲ್ಲ, ರೈತರು ಬಿತ್ತಿದ ಬೀಜ ಮೊಳಕೆ ಒಡೆಯುತ್ತಿಲ್ಲ, ಆದರೂ ಸರ್ಕಾರದ ಕಲೆಕ್ಷನ್ ನಿಲ್ಲುತ್ತಿಲ್ಲ’ ಎಂದು ಟೀಕಿಸಿದೆ.
ರಾಜ್ಯದಲ್ಲಿ ಬರದ ಬೇಗೆಗೆ ಐವತ್ತಕ್ಕೂ ಹೆಚ್ಚು ತಾಲ್ಲೂಕುಗಳು ತತ್ತರಿಸಿವೆ. ಆದರೆ, ಸಿದ್ದರಾಮಯ್ಯ ಆಡಳಿತ ಉತ್ತರ ಹುಡುಕುತ್ತಿಲ್ಲ. ಮಳೆ ಇಲ್ಲದೆ ಜಲಾಶಯಗಳ ತುಂಬುತ್ತಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ಮಡಿಲು ಮಾತ್ರ ತುಂಬಿ ತುಳುಕುತ್ತಿದೆ. ಬರಗಾಲ ಬಂದರೂ ತಾನು ಮಾತ್ರ ಬೆಣ್ಣೆ ತಿನ್ನುತ್ತಿರುವ ಈ ಸರ್ಕಾರದ ಹಸಿವು ನೀಗುವವರೆಗೂ ರೈತನ ಉಸಿರಿಗಿಲ್ಲ ಗ್ಯಾರಂಟಿ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಹಿಂದೆಂದೂ ಕೇಳರಿಯದ ರೀತಿಯಲ್ಲಿ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಪ್ರವೇಶಕ್ಕೇ ನಿರ್ಬಂಧ ಇರಬೇಕಾದ ಕಲೆಕ್ಷನ್ ಏಜೆಂಟರಿಗೆ ಕರ್ನಾಟಕ ಕಾಂಗ್ರೆಸ್ ಕಚೇರಿಯಲ್ಲೇ ಕುರ್ಚಿ ಮಾತ್ರವಲ್ಲ, ಕೊಠಡಿಯೂ ನೀಡಿ ಸಾಕುತ್ತಿದೆ. ಖಾಲಿ ಹುದ್ದೆಗಳಿಗೆ ನೇಮಕಾತಿಗಳನ್ನೂ ಮಾಡದೆ ಎಟಿಎಂ ಸರ್ಕಾರ ಲಂಚವನ್ನೇ ಅಧಿಕೃತಗೊಳಿಸುತ್ತಿದೆ.
ಎತ್ತ ಸಾಗುತ್ತಿದೆ ಕರ್ನಾಟಕ..?? ಗೂಂಡಾ ರೌಡಿಯೊಬ್ಬ ಸರ್ಕಾರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಬೇಕೆ..? ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ತ್ರಿವರ್ಣ ಧ್ವಜ ರಾರಾಜಿಸುವ ಬದಲು ಕರ್ನಾಟಕ ಕಾಂಗ್ರೆಸ್ ನ ಧ್ವಜ ಮತ್ತು ಚಿಹ್ನೆ ಮೇಳೈಸಬೇಕೆ..? ಸ್ವಾತಂತ್ರ್ಯ ದಿನದಂತಹ ಪವಿತ್ರ ದಿನದಂದು, ಮಕ್ಕಳು & ಸಾರ್ವಜನಿಕರು ಗೂಂಡಾಗಳ ಭಾಷಣ ಕೇಳುವಂತಾಗಿರುವುದು ದುರಂತ ಎಂದು ಬಿಜೆಪಿ ಹೇಳಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…