BREAKING NEWS

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ವಕ್ಕರಿಸಿದೆ: ಬಿಜೆಪಿ

ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ ಚಿಂತೆ ಇಲ್ಲ. ಬಿತ್ತನೆ ಬೀಜ ದರ ನಿಗ್ರಹಕ್ಕೂ ಸರ್ಕಾರ ಒಪ್ಪುತ್ತಿಲ್ಲ, ಕೃಷಿ ಇಲಾಖೆಯ ಕರ್ಮಕಾಂಡಕ್ಕೆ ಕೊನೆಯಿಲ್ಲ, ರೈತರು ಬಿತ್ತಿದ ಬೀಜ ಮೊಳಕೆ ಒಡೆಯುತ್ತಿಲ್ಲ, ಆದರೂ ಸರ್ಕಾರದ ಕಲೆಕ್ಷನ್ ನಿಲ್ಲುತ್ತಿಲ್ಲ’ ಎಂದು ಟೀಕಿಸಿದೆ.

ರಾಜ್ಯದಲ್ಲಿ ಬರದ ಬೇಗೆಗೆ ಐವತ್ತಕ್ಕೂ ಹೆಚ್ಚು ತಾಲ್ಲೂಕುಗಳು ತತ್ತರಿಸಿವೆ. ಆದರೆ, ಸಿದ್ದರಾಮಯ್ಯ ಆಡಳಿತ ಉತ್ತರ ಹುಡುಕುತ್ತಿಲ್ಲ. ಮಳೆ ಇಲ್ಲದೆ ಜಲಾಶಯಗಳ ತುಂಬುತ್ತಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ಮಡಿಲು ಮಾತ್ರ ತುಂಬಿ ತುಳುಕುತ್ತಿದೆ. ಬರಗಾಲ ಬಂದರೂ ತಾನು ಮಾತ್ರ ಬೆಣ್ಣೆ ತಿನ್ನುತ್ತಿರುವ ಈ ಸರ್ಕಾರದ ಹಸಿವು ನೀಗುವವರೆಗೂ ರೈತನ ಉಸಿರಿಗಿಲ್ಲ ಗ್ಯಾರಂಟಿ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಹಿಂದೆಂದೂ ಕೇಳರಿಯದ ರೀತಿಯಲ್ಲಿ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಪ್ರವೇಶಕ್ಕೇ ನಿರ್ಬಂಧ ಇರಬೇಕಾದ ಕಲೆಕ್ಷನ್ ಏಜೆಂಟರಿಗೆ ಕರ್ನಾಟಕ ಕಾಂಗ್ರೆಸ್ ಕಚೇರಿಯಲ್ಲೇ ಕುರ್ಚಿ ಮಾತ್ರವಲ್ಲ, ಕೊಠಡಿಯೂ ನೀಡಿ ಸಾಕುತ್ತಿದೆ. ಖಾಲಿ ಹುದ್ದೆಗಳಿಗೆ ನೇಮಕಾತಿಗಳನ್ನೂ ಮಾಡದೆ‌ ಎಟಿಎಂ ಸರ್ಕಾರ ಲಂಚವನ್ನೇ ಅಧಿಕೃತಗೊಳಿಸುತ್ತಿದೆ.

ಎತ್ತ ಸಾಗುತ್ತಿದೆ ಕರ್ನಾಟಕ..?? ಗೂಂಡಾ ರೌಡಿಯೊಬ್ಬ ಸರ್ಕಾರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಬೇಕೆ..? ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ತ್ರಿವರ್ಣ ಧ್ವಜ ರಾರಾಜಿಸುವ ಬದಲು ಕರ್ನಾಟಕ ಕಾಂಗ್ರೆಸ್ ನ  ಧ್ವಜ ಮತ್ತು ಚಿಹ್ನೆ ಮೇಳೈಸಬೇಕೆ..? ಸ್ವಾತಂತ್ರ್ಯ ದಿನದಂತಹ ಪವಿತ್ರ ದಿನದಂದು, ಮಕ್ಕಳು & ಸಾರ್ವಜನಿಕರು ಗೂಂಡಾಗಳ ಭಾಷಣ ಕೇಳುವಂತಾಗಿರುವುದು ದುರಂತ ಎಂದು ಬಿಜೆಪಿ ಹೇಳಿದೆ.

andolanait

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago