ಚಂಡೀಗಢ: 2015ರ ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.
ನಾರ್ಕೊಟಿಕ್ಸ್ ಡ್ರಗ್ಸ್ ಆ್ಯಂಡ್ ಸೈಕೋಟ್ರಾಪಿಕ್ ಸಬ್ಸ್ಟನ್ಸಸ್ ಆ್ಯಕ್ಟ್ ಅಡಿಯಲ್ಲಿ ಸುಖಪಾಲ್ ಖೈರಾ ಅವರನ್ನು ಜಲಾಲಬಾದ್ ಪೊಲೀಸರು ಇಂದು ಬೆಳಗ್ಗೆ (ಸೆಪ್ಟೆಂಬರ್ 28) 6.30ರ ಸುಮಾರಿಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಚಂಡೀಗಢದಲ್ಲಿರುವ ನಿವಾಸದಲ್ಲಿ ಸುಖಪಾಲ್ ಖೈರಾ ಅವರನ್ನು ಬಂಧನಕ್ಕೊಳಪಡಿಸಲಾಗಿದ್ದು, ಈ ವೇಳೆ ಭಾರೀ ಹೈಡ್ರಾಮಾ ನಡೆದಿದೆ.
ಬಂಧನಕ್ಕೂ ಮೊದಲು ಸುಖಪಾಲ್ ಖೈರಾ ಅವರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಹಾಗೆಯೇ, ಬಂಧನದ ಘಟನೆಯನ್ನು ಫೇಸ್ಬುಕ್ ಲೈವ್ ಮೂಲಕ ಜನರಿಗೆ ತೋರಿಸಿದ್ದಾರೆ.
ಅಕ್ರಮವಾಗಿ ಮಾದಕವಸ್ತು ಸಾಗಣೆ ಪ್ರಕರಣದಲ್ಲಿ ಸುಖಪಾಲ್ ಖೈರಾ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.
https://x.com/ANI/status/1707223944783376775?s=20
ಸುಖಪಾಲ್ ಸಿಂಗ್ ಖೈರಾ ಅವರನ್ನು 2021ರಲ್ಲೂ ಬಂಧನಕ್ಕೊಳಪಡಿಸಲಾಗಿತ್ತು. ಅಕ್ರಮವಾಗಿ ಮಾದಕವಸ್ತು ಸಾಗಣೆ, ಮಾದಕವಸ್ತು ದಂಧೆ, ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಖಪಾಲ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ನಡುವೆ ನಕಲಿ ಪಾಸ್ಪೋರ್ಟ್ ಪ್ರಕರಣವೂ ಸುಖಪಾಲ್ ಖೈರಾ ವಿರುದ್ಧ ಕೇಳಿಬಂದಿತ್ತು.
ರಾಜಕೀಯ ಸೇಡಿಗಾಗಿ ಬಂಧನ
ಈ ನಡುವೆ ಸುಖಪಾಲ್ ಖೈರಾ ಅವರ ಬಂಧನವನ್ನು ಪಂಜಾಬ್ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜಕೀಯ ಸೇಡಿಗಾಗಿ ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾ ಅವರನ್ನು ಬಂಧಿಸಲಾಗಿದೆ, ಇದು ಪ್ರತಿಪಕ್ಷಗಳನ್ನು ಬೆದರಿಸುವ ಪ್ರಯತ್ನವಾಗಿದೆ ಮತ್ತು ಪ್ರಮುಖ ವಿಷಯಗಳಿಂದ ಗಮನವನ್ನು ಸೆಳೆಯಲು ಎಎಪಿ ಸರ್ಕಾರ ನಡೆಸಿರುವ ತಂತ್ರವಾಗಿದೆ ಎಂದು ಹೇಳಿದ್ದಾರೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…