BREAKING NEWS

ಡ್ರಗ್ಸ್‌ ಪ್ರಕರಣ;‌ ಕಾಂಗ್ರೆಸ್‌ ಶಾಸಕ ಸುಖಪಾಲ್‌ ಖೈರಾ ಬಂಧನ

ಚಂಡೀಗಢ: 2015ರ ಡ್ರಗ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಸುಖಪಾಲ್‌ ಸಿಂಗ್ ಖೈರಾ ಅವರನ್ನು ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ನಾರ್ಕೊಟಿಕ್ಸ್‌ ಡ್ರಗ್ಸ್‌ ಆ್ಯಂಡ್‌ ಸೈಕೋಟ್ರಾಪಿಕ್‌ ಸಬ್‌ಸ್ಟನ್ಸಸ್‌ ಆ್ಯಕ್ಟ್‌ ಅಡಿಯಲ್ಲಿ ಸುಖಪಾಲ್‌ ಖೈರಾ ಅವರನ್ನು ಜಲಾಲಬಾದ್‌ ಪೊಲೀಸರು ಇಂದು ಬೆಳಗ್ಗೆ (ಸೆಪ್ಟೆಂಬರ್‌ 28) 6.30ರ ಸುಮಾರಿಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಚಂಡೀಗಢದಲ್ಲಿರುವ ನಿವಾಸದಲ್ಲಿ ಸುಖಪಾಲ್‌ ಖೈರಾ ಅವರನ್ನು ಬಂಧನಕ್ಕೊಳಪಡಿಸಲಾಗಿದ್ದು, ಈ ವೇಳೆ ಭಾರೀ ಹೈಡ್ರಾಮಾ ನಡೆದಿದೆ.

ಬಂಧನಕ್ಕೂ ಮೊದಲು ಸುಖಪಾಲ್‌ ಖೈರಾ ಅವರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಹಾಗೆಯೇ, ಬಂಧನದ ಘಟನೆಯನ್ನು ಫೇಸ್‌ಬುಕ್‌ ಲೈವ್ ಮೂಲಕ ಜನರಿಗೆ ತೋರಿಸಿದ್ದಾರೆ.

ಅಕ್ರಮವಾಗಿ ಮಾದಕವಸ್ತು ಸಾಗಣೆ ಪ್ರಕರಣದಲ್ಲಿ ಸುಖಪಾಲ್‌ ಖೈರಾ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

https://x.com/ANI/status/1707223944783376775?s=20

ಸುಖಪಾಲ್‌ ಸಿಂಗ್‌ ಖೈರಾ ಅವರನ್ನು 2021ರಲ್ಲೂ ಬಂಧನಕ್ಕೊಳಪಡಿಸಲಾಗಿತ್ತು. ಅಕ್ರಮವಾಗಿ ಮಾದಕವಸ್ತು ಸಾಗಣೆ, ಮಾದಕವಸ್ತು ದಂಧೆ, ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಖಪಾಲ್‌ ಸಿಂಗ್‌ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ನಡುವೆ ನಕಲಿ ಪಾಸ್‌ಪೋರ್ಟ್‌ ಪ್ರಕರಣವೂ ಸುಖಪಾಲ್‌ ಖೈರಾ ವಿರುದ್ಧ ಕೇಳಿಬಂದಿತ್ತು.

ರಾಜಕೀಯ ಸೇಡಿಗಾಗಿ ಬಂಧನ
ಈ ನಡುವೆ ಸುಖಪಾಲ್‌ ಖೈರಾ ಅವರ ಬಂಧನವನ್ನು ಪಂಜಾಬ್ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜಕೀಯ ಸೇಡಿಗಾಗಿ ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾ ಅವರನ್ನು ಬಂಧಿಸಲಾಗಿದೆ, ಇದು ಪ್ರತಿಪಕ್ಷಗಳನ್ನು ಬೆದರಿಸುವ ಪ್ರಯತ್ನವಾಗಿದೆ ಮತ್ತು ಪ್ರಮುಖ ವಿಷಯಗಳಿಂದ ಗಮನವನ್ನು ಸೆಳೆಯಲು ಎಎಪಿ ಸರ್ಕಾರ ನಡೆಸಿರುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

andolanait

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

7 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

9 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

11 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

16 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

16 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

18 hours ago