BREAKING NEWS

ಡ್ರಗ್ಸ್‌ ಪ್ರಕರಣ;‌ ಕಾಂಗ್ರೆಸ್‌ ಶಾಸಕ ಸುಖಪಾಲ್‌ ಖೈರಾ ಬಂಧನ

ಚಂಡೀಗಢ: 2015ರ ಡ್ರಗ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಸುಖಪಾಲ್‌ ಸಿಂಗ್ ಖೈರಾ ಅವರನ್ನು ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ನಾರ್ಕೊಟಿಕ್ಸ್‌ ಡ್ರಗ್ಸ್‌ ಆ್ಯಂಡ್‌ ಸೈಕೋಟ್ರಾಪಿಕ್‌ ಸಬ್‌ಸ್ಟನ್ಸಸ್‌ ಆ್ಯಕ್ಟ್‌ ಅಡಿಯಲ್ಲಿ ಸುಖಪಾಲ್‌ ಖೈರಾ ಅವರನ್ನು ಜಲಾಲಬಾದ್‌ ಪೊಲೀಸರು ಇಂದು ಬೆಳಗ್ಗೆ (ಸೆಪ್ಟೆಂಬರ್‌ 28) 6.30ರ ಸುಮಾರಿಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಚಂಡೀಗಢದಲ್ಲಿರುವ ನಿವಾಸದಲ್ಲಿ ಸುಖಪಾಲ್‌ ಖೈರಾ ಅವರನ್ನು ಬಂಧನಕ್ಕೊಳಪಡಿಸಲಾಗಿದ್ದು, ಈ ವೇಳೆ ಭಾರೀ ಹೈಡ್ರಾಮಾ ನಡೆದಿದೆ.

ಬಂಧನಕ್ಕೂ ಮೊದಲು ಸುಖಪಾಲ್‌ ಖೈರಾ ಅವರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಹಾಗೆಯೇ, ಬಂಧನದ ಘಟನೆಯನ್ನು ಫೇಸ್‌ಬುಕ್‌ ಲೈವ್ ಮೂಲಕ ಜನರಿಗೆ ತೋರಿಸಿದ್ದಾರೆ.

ಅಕ್ರಮವಾಗಿ ಮಾದಕವಸ್ತು ಸಾಗಣೆ ಪ್ರಕರಣದಲ್ಲಿ ಸುಖಪಾಲ್‌ ಖೈರಾ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

https://x.com/ANI/status/1707223944783376775?s=20

ಸುಖಪಾಲ್‌ ಸಿಂಗ್‌ ಖೈರಾ ಅವರನ್ನು 2021ರಲ್ಲೂ ಬಂಧನಕ್ಕೊಳಪಡಿಸಲಾಗಿತ್ತು. ಅಕ್ರಮವಾಗಿ ಮಾದಕವಸ್ತು ಸಾಗಣೆ, ಮಾದಕವಸ್ತು ದಂಧೆ, ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಖಪಾಲ್‌ ಸಿಂಗ್‌ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ನಡುವೆ ನಕಲಿ ಪಾಸ್‌ಪೋರ್ಟ್‌ ಪ್ರಕರಣವೂ ಸುಖಪಾಲ್‌ ಖೈರಾ ವಿರುದ್ಧ ಕೇಳಿಬಂದಿತ್ತು.

ರಾಜಕೀಯ ಸೇಡಿಗಾಗಿ ಬಂಧನ
ಈ ನಡುವೆ ಸುಖಪಾಲ್‌ ಖೈರಾ ಅವರ ಬಂಧನವನ್ನು ಪಂಜಾಬ್ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜಕೀಯ ಸೇಡಿಗಾಗಿ ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾ ಅವರನ್ನು ಬಂಧಿಸಲಾಗಿದೆ, ಇದು ಪ್ರತಿಪಕ್ಷಗಳನ್ನು ಬೆದರಿಸುವ ಪ್ರಯತ್ನವಾಗಿದೆ ಮತ್ತು ಪ್ರಮುಖ ವಿಷಯಗಳಿಂದ ಗಮನವನ್ನು ಸೆಳೆಯಲು ಎಎಪಿ ಸರ್ಕಾರ ನಡೆಸಿರುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

andolanait

Recent Posts

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ!

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…

6 mins ago

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ…

35 mins ago

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

4 hours ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

4 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

6 hours ago