Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಸ್ನೇಹಿತನನ್ನು ರಕ್ಷಿಸಲು ಹೋಗಿ ನೀರುಪಾಲಾದ ವೈದ್ಯ

ಮಂಗಳೂರು : ಸ್ನೇಹಿತನನ್ನು ರಕ್ಷಿಸಲು ಹೋಗಿ ವೈದ್ಯನೊಬ್ಬ ಸಮುದ್ರಪಾಲಾದ ಘಟನೆ ಭಾನುವಾರ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ.

ಡಾ.ಆಶೀಕ್ ಗೌಡ ಸಮುದ್ರ ಪಾಲಾದ ವೈದ್ಯ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂಟನ್ರ್ಶಿಪ್ ಮಾಡುತ್ತಿದ್ದ ಐವರು ವೈದ್ಯರ ತಂಡವೊಂದು ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಿತ್ತು.

ಅಂತೆಯೇ ಇವರು ಸೋಮೇಶ್ವರ ಬೀಚ್ ನ ರುದ್ರಪಾದೆ ಮೇಲೆರಿದ್ದರು. ಈ ವೇಳೆ ಡಾ.ಪ್ರದೀಪ್ ಎಂಬವರು ಬಂಡೆಯ ಮೇಲಿಂದ ಬಿದ್ದಿದ್ದರು. ಕೆಳಗೆ ಬಂಡೆಯನ್ನ ಹಿಡಿದು ಸಹಾಯಕ್ಕೆ ಯಾಚಿಸಿದ್ರು. ಈ ವೇಳೆ ಪ್ರದೀಪ್ ರಕ್ಷಣೆಗೆ ಡಾ.ಆಶೀಕ್ ಗೌಡ ಪ್ರಯತ್ನಿಸಿದ್ದರು. ಆಗ ಆಶೀಕ್ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ.

ಇತ್ತ ಪ್ರದೀಪ್ ಕಲ್ಲುಗಳ ಆಸರೆ ಪಡೆದು ಮೇಲೆ ಬಂದಿದ್ದಾರೆ. ಕೂಡಲೇ ಪ್ರದೀಪ್ ಪೊಲೀಸರಿಗೆ ಘಟನೆಯ ಮಾಹಿತಿ ನೀಡಿದ್ದಾರೆ. ಇಂದು ರುದ್ರಪಾದೆಯ ಸಮೀಪದಲ್ಲೇ ಆಶೀಕ್ ಮೃತ ದೇಹ ಪತ್ತೆಯಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!