ಮಂಗಳೂರು : ಸ್ನೇಹಿತನನ್ನು ರಕ್ಷಿಸಲು ಹೋಗಿ ವೈದ್ಯನೊಬ್ಬ ಸಮುದ್ರಪಾಲಾದ ಘಟನೆ ಭಾನುವಾರ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ.
ಡಾ.ಆಶೀಕ್ ಗೌಡ ಸಮುದ್ರ ಪಾಲಾದ ವೈದ್ಯ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂಟನ್ರ್ಶಿಪ್ ಮಾಡುತ್ತಿದ್ದ ಐವರು ವೈದ್ಯರ ತಂಡವೊಂದು ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಿತ್ತು.
ಅಂತೆಯೇ ಇವರು ಸೋಮೇಶ್ವರ ಬೀಚ್ ನ ರುದ್ರಪಾದೆ ಮೇಲೆರಿದ್ದರು. ಈ ವೇಳೆ ಡಾ.ಪ್ರದೀಪ್ ಎಂಬವರು ಬಂಡೆಯ ಮೇಲಿಂದ ಬಿದ್ದಿದ್ದರು. ಕೆಳಗೆ ಬಂಡೆಯನ್ನ ಹಿಡಿದು ಸಹಾಯಕ್ಕೆ ಯಾಚಿಸಿದ್ರು. ಈ ವೇಳೆ ಪ್ರದೀಪ್ ರಕ್ಷಣೆಗೆ ಡಾ.ಆಶೀಕ್ ಗೌಡ ಪ್ರಯತ್ನಿಸಿದ್ದರು. ಆಗ ಆಶೀಕ್ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ.
ಇತ್ತ ಪ್ರದೀಪ್ ಕಲ್ಲುಗಳ ಆಸರೆ ಪಡೆದು ಮೇಲೆ ಬಂದಿದ್ದಾರೆ. ಕೂಡಲೇ ಪ್ರದೀಪ್ ಪೊಲೀಸರಿಗೆ ಘಟನೆಯ ಮಾಹಿತಿ ನೀಡಿದ್ದಾರೆ. ಇಂದು ರುದ್ರಪಾದೆಯ ಸಮೀಪದಲ್ಲೇ ಆಶೀಕ್ ಮೃತ ದೇಹ ಪತ್ತೆಯಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…