ಮಂಗಳೂರು : ಸ್ನೇಹಿತನನ್ನು ರಕ್ಷಿಸಲು ಹೋಗಿ ವೈದ್ಯನೊಬ್ಬ ಸಮುದ್ರಪಾಲಾದ ಘಟನೆ ಭಾನುವಾರ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ.
ಡಾ.ಆಶೀಕ್ ಗೌಡ ಸಮುದ್ರ ಪಾಲಾದ ವೈದ್ಯ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂಟನ್ರ್ಶಿಪ್ ಮಾಡುತ್ತಿದ್ದ ಐವರು ವೈದ್ಯರ ತಂಡವೊಂದು ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಿತ್ತು.
ಅಂತೆಯೇ ಇವರು ಸೋಮೇಶ್ವರ ಬೀಚ್ ನ ರುದ್ರಪಾದೆ ಮೇಲೆರಿದ್ದರು. ಈ ವೇಳೆ ಡಾ.ಪ್ರದೀಪ್ ಎಂಬವರು ಬಂಡೆಯ ಮೇಲಿಂದ ಬಿದ್ದಿದ್ದರು. ಕೆಳಗೆ ಬಂಡೆಯನ್ನ ಹಿಡಿದು ಸಹಾಯಕ್ಕೆ ಯಾಚಿಸಿದ್ರು. ಈ ವೇಳೆ ಪ್ರದೀಪ್ ರಕ್ಷಣೆಗೆ ಡಾ.ಆಶೀಕ್ ಗೌಡ ಪ್ರಯತ್ನಿಸಿದ್ದರು. ಆಗ ಆಶೀಕ್ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ.
ಇತ್ತ ಪ್ರದೀಪ್ ಕಲ್ಲುಗಳ ಆಸರೆ ಪಡೆದು ಮೇಲೆ ಬಂದಿದ್ದಾರೆ. ಕೂಡಲೇ ಪ್ರದೀಪ್ ಪೊಲೀಸರಿಗೆ ಘಟನೆಯ ಮಾಹಿತಿ ನೀಡಿದ್ದಾರೆ. ಇಂದು ರುದ್ರಪಾದೆಯ ಸಮೀಪದಲ್ಲೇ ಆಶೀಕ್ ಮೃತ ದೇಹ ಪತ್ತೆಯಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…