BREAKING NEWS

ಬಿಜೆಪಿಗೆ ಆರಂಭಿಕ ಮುನ್ನಡೆ : ಕಾಂಗ್ರೆಸ್‌ಗೆ ಕೊಂಚ ಹಿನ್ನಡೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್‌ ಎರಡಂಕಿ ದಾಟಿದೆ.

ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮುನ್ನಡೆ, ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಡಾ ರಂಗನಾಥ್ ಮುನ್ನಡೆ, ತುಮಕೂರು ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಮುನ್ನಡೆ ಸಾಧಿಸಿದ್ದಾರೆ.

ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಸುರೇಶ್ ಗೌಡ ಮುನ್ನಡೆ, ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ, ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ, ಶಿರಾದಲ್ಲಿ ಕಾಂಗ್ರೆಸ್‌ನ ಟಿಬಿ ಜಯಚಂದ್ರ ಮುನ್ನಡೆ, ಪಾವಗಡ ಜೆಡಿಎಸ್‌ನ ತಿಮ್ಮರಾಯಪ್ಪ ಮುನ್ನಡೆ ಗಳಿಸಿದ್ದು, ಮಧುಗಿರಿಯಲ್ಲಿ ಕಾಂಗ್ರೆಸ್‌ನ ಕೆ.ಎನ್.ರಾಜಣ್ಣ ಮುನ್ನಡೆ ಗಳಿಸಿದ್ದಾರೆ.

ಇನ್ನೂ, ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿಗೆ ಎಸ್‌ಆರ್‌ ವಿಶ್ವನಾಥ್ ಮುನ್ನಡೆ ಗಳಿಸಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್‌ನ ಕೃಷ್ಣ ಬೈರೇಗೌಡ ಮುನ್ನಡೆ, ಯಶವಂತಪುರದಲ್ಲಿ ಬಿಜೆಪಿಯ ಶಾಸಕ ಎಸ್‌ಟಿ ಸೋಮಶೇಖರ್ ಮುನ್ನಡೆ ಗಳಿಸಿದ್ದಾರೆ. ದಾಸರಹಳ್ಳಿಯಲ್ಲಿ ಜೆಡಿಎಸ್‌ ಶಾಸಕ ಆರ್ ಮಂಜುನಾಥ್ ಮುನ್ನಡೆ, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ M ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದು, ಆನೇಕಲ್‌ನಲ್ಲಿ ಕಾಂಗ್ರೆಸ್‌ನ ಬಿ ಶಿವಣ್ಣ ಮುನ್ನಡೆ ಗಳಿಸಿದ್ದಾರೆ.

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

5 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

5 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

5 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

5 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

5 hours ago