ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್ ಎರಡಂಕಿ ದಾಟಿದೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮುನ್ನಡೆ, ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಡಾ ರಂಗನಾಥ್ ಮುನ್ನಡೆ, ತುಮಕೂರು ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಮುನ್ನಡೆ ಸಾಧಿಸಿದ್ದಾರೆ.
ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಸುರೇಶ್ ಗೌಡ ಮುನ್ನಡೆ, ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ, ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ, ಶಿರಾದಲ್ಲಿ ಕಾಂಗ್ರೆಸ್ನ ಟಿಬಿ ಜಯಚಂದ್ರ ಮುನ್ನಡೆ, ಪಾವಗಡ ಜೆಡಿಎಸ್ನ ತಿಮ್ಮರಾಯಪ್ಪ ಮುನ್ನಡೆ ಗಳಿಸಿದ್ದು, ಮಧುಗಿರಿಯಲ್ಲಿ ಕಾಂಗ್ರೆಸ್ನ ಕೆ.ಎನ್.ರಾಜಣ್ಣ ಮುನ್ನಡೆ ಗಳಿಸಿದ್ದಾರೆ.
ಇನ್ನೂ, ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿಗೆ ಎಸ್ಆರ್ ವಿಶ್ವನಾಥ್ ಮುನ್ನಡೆ ಗಳಿಸಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್ನ ಕೃಷ್ಣ ಬೈರೇಗೌಡ ಮುನ್ನಡೆ, ಯಶವಂತಪುರದಲ್ಲಿ ಬಿಜೆಪಿಯ ಶಾಸಕ ಎಸ್ಟಿ ಸೋಮಶೇಖರ್ ಮುನ್ನಡೆ ಗಳಿಸಿದ್ದಾರೆ. ದಾಸರಹಳ್ಳಿಯಲ್ಲಿ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಮುನ್ನಡೆ, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ M ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದು, ಆನೇಕಲ್ನಲ್ಲಿ ಕಾಂಗ್ರೆಸ್ನ ಬಿ ಶಿವಣ್ಣ ಮುನ್ನಡೆ ಗಳಿಸಿದ್ದಾರೆ.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…