BREAKING NEWS

ಬೆಳ್ಳಂಬೆಳಿಗ್ಗೆ ಎನ್‌ಕೌಂಟರ್ : ಉತ್ತರ ಪ್ರದೇಶ ಪೊಲೀಸರ ಗುಂಡೇಟಿಗೆ ಕ್ರಿಮಿನಲ್ ಗುಫ್ರಾನ್ ಬಲಿ

ಲಖನೌ : ಎರಡು ಡಜನ್‌ಗೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಎನ್‌ಕೌಂಟರ್‌ನಲ್ಲಿ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಮಂಗಳವಾರ ಹತ್ಯೆ ಮಾಡಲಾಗಿದೆ. ಕೊಲೆ ಹಾಗೂ ಡಕಾಯತಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಗುಫ್ರಾನ್ ಎಂಬ ಕ್ರಿಮಿನಲ್, ಉತ್ತರ ಪ್ರದೇಶ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

ಕೌಶಂಬಿ ಜಿಲ್ಲೆಯಲ್ಲಿ ವಿಶೇಷ ಕಾರ್ಯ ಪಡೆಯು ಜಿಲ್ಲೆಯ ಮಾಂಝನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಮ್ದಾ ಶುಗರ್ ಮಿಲ್ ರಸ್ತೆ ಸಮೀಪ ಬೆಳಗಿನ ಜಾವ 5.30ರ ಸುಮಾರಿಗೆ ರೇಡ್ ನಡೆಸುತ್ತಿತ್ತು. ಆಗ ಪೊಲೀಸ್ ತಂಡಕ್ಕೆ ಮುಖಾಮುಖಿಯಾದ ಗುಫ್ರಾನ್, ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಕೂಡ ಗುಂಡಿನ ದಾಳಿಯ ಉತ್ತರ ನೀಡಿದ್ದಾರೆ. ಪರಸ್ಪರ ಗುಂಡಿನ ಚಕಮಕಿಯಲ್ಲಿ ಆತನಿಗೆ ಬುಲೆಟ್ ತಗುಲಿ ಗಾಯಗಳಾಗಿವೆ. ಗುಫ್ರಾನ್‌ನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ತೀವ್ರ ಗಾಯಗಳಿಂದ ಮೃತಪಟ್ಟಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರತಾಪಗಡ ಹಾಗೂ ಇತರೆ ಜಿಲ್ಲೆಗಳಲ್ಲಿ ಕೊಲೆ, ಕೊಲೆ ಪ್ರಯತ್ನ ಮತ್ತು ದರೋಡೆಗಳನ್ನು ನಡೆಸಿದ 18ಕ್ಕೂ ಅಧಿಕ ಪ್ರಕರಣಗಳಲ್ಲಿ ಗುಫ್ರಾನ್ ವಾಂಟೆಡ್ ಲಿಸ್ಟ್‌ನಲ್ಲಿದ್ದ. ಆತನನ್ನು ಬಂಧಿಸಲು ಸುಳಿವು ನೀಡಿದವರಿಗೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು. ಎನ್‌ಕೌಂಟರ್‌ಗೆ ಜೀವ ಕಳೆದುಕೊಂಡ ಗುಫ್ರಾನ್, ಪ್ರತಾಪ್‌ಗಡ ಜಿಲ್ಲೆಯ ಆಜಾದ್ ನಗರ ನಿವಾಸಿಯಾಗಿದ್ದ.

“ಮೊಹಮ್ಮದ್ ಗುಫ್ರಾನ್ ಎಂದು ಗುರುತಿಸಲಾದ ಕ್ರಿಮಿನಲ್‌, ಕೌಶಂಬಿ ಜಿಲ್ಲೆಯ ಮಾಂಝನ್ಪುರ ಸಮ್ದಾ ಶುಗರ್ ಮಿಲ್ ಸಮೀಪ ಉತ್ತರ ಪ್ರದೇಶ ಎಸ್‌ಟಿಎಫ್ ಜತೆ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾನೆ. ಆತನ ತಲೆಗೆ 1,25,000 ರೂ ಬಹುಮಾನ ಘೋಷಿಸಲಾಗಿತ್ತು” ಎಂದು ಕೌಶಂಬಿಯ ಎಸ್‌ಪಿ ಬ್ರಿಜೇಶ್ ಶ್ರೀವಾಸ್ತವ ಹೇಳಿದ್ದಾರೆ.

ಇದಲ್ಲದೆ ಪ್ರಯಾಗ್‌ರಾಜ್ ವಲಯದ ಎಡಿಜಿ ಅವರು ಗುಫ್ರಾನ್ ಪತ್ತೆಗೆ 1 ಲಕ್ಷ ರೂ ಹಾಗೂ ಸುಲ್ತಾನಪುರ ಪೊಲೀಸ್ ಅಧಿಕಾರಿಗಳು 25,000 ರೂ ಬಹುಮಾನ ಪ್ರಕಟಿಸಿದ್ದರು.

ಉತ್ತರ ಪ್ರದೇಶದಲ್ಲಿ ಎನ್‌ಕೌಂಟರ್‌ನಲ್ಲಿಯೇ ಉತ್ತರ! : ಉತ್ತರ ಪ್ರದೇಶ ಪೊಲೀಸರು ಮತ್ತು ಕ್ರಿಮಿನಲ್‌ಗಳ ನಡುವಿನ ಎನ್‌ಕೌಂಟರ್ ಸರಣಿಗೆ ಗುಫ್ರಾನ್ ಹತ್ಯೆ ಹೊಸ ಸೇರ್ಪಡೆಯಾಗಿದೆ. ಯೋಗಿ ಆದಿತ್ಯನಾಥ್ ಅವರು 2017ರಲ್ಲಿ ಉತ್ತರ ಪ್ರದೇಶ ಸಿಎಂ ಆದ ಬಳಿಕ ಈವರೆಗೂ ಪೊಲೀಸರು 10,900 ಎನ್‌ಕೌಂಟರ್‌ಗಳನ್ನು ನಡೆಸಿದ್ದಾರೆ. ಅವರಲ್ಲಿ 185 ಕ್ರಿಮಿನಲ್‌ಗಳನ್ನು ಹತ್ಯೆ ಮಾಡಲಾಗಿದೆ. 5,046 ಮಂದಿ ಗಾಯಗೊಂಡಿದ್ದು, 23,300 ಅಪರಾಧಿಗಳನ್ನು ಬಂಧಿಸಲಾಗಿದೆ.

ಇತ್ತೀಚೆಗೆ ಉತ್ತರ ಪ್ರದೇಶದ ಕುಖ್ಯಾತ ಗ್ಯಾಂಗ್‌ಸ್ಟರ್ ಹಾಗೂ ಸಮಾಜವಾದಿ ಪಕ್ಷದ ಮಾಜಿ ನಾಯಕ ಅತೀಕ್ ಅಹ್ಮದ್‌ನ ಮಗ ಅಸದ್ ಅಹ್ಮದ್ ಹಾಗೂ ಆತನ ಸಹಚರನನ್ನು ಉತ್ತರ ಪ್ರದೇಶ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಅದಾಗಿ ಕೆಲವೇ ದಿನಗಳಲ್ಲಿ ಪೊಲೀಸರ ವಶದಲ್ಲಿದ್ದ ಅತೀಕ್ ಮತ್ತು ವನ ಸಹೋದರ ಅಶ್ರಫ್‌ನನ್ನು ಮೂವರು ಯುವಕರು ಗುಂಡಿನ ದಾಳಿ ನಡೆಸಿ ಕೊಂದಿದ್ದರು.

lokesh

Recent Posts

ಪ್ರತ್ಯೇಕ ಪ್ರಕರಣ: ಮನೆ, ದೇವಸ್ಥಾನದಲ್ಲಿ ಕಳವು

ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…

11 hours ago

ಜಿಲ್ಲಾಧಿಕಾರಿ ಆದೇಶ ಮೀರಿ ಶಾಲೆ ಸಮಯದಲ್ಲಿ ಸಂಚಾರ: 6 ಟಿಪ್ಪರ್ ವಶ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್‌ಗಳ ಹಾವಳಿ ಹೆಚ್ಚಾಗಿ ಶಾಲಾ ಮಕ್ಕಳ ವಾಹಕ ಅಪಘಾತಕ್ಕೀಡಾಗಿ ಹಲವು ಮಕ್ಕಳಿಗೆ ಗಾಯಗಳಾಗಿದ್ದ ಪ್ರಕರಣದ ಬಳಿಕ ತಾಲ್ಲೂಕಿನಾದ್ಯಂತ…

11 hours ago

ಗೃಹಲಕ್ಷ್ಮೀ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್‌

ಬೆಂಗಳೂರು: ಕರ್ನಾಟಕ ಸರ್ಕಾರದ 'ಗೃಹಲಕ್ಷ್ಮಿ' ಯೋಜನೆಯಡಿ ಫಲಾನುಭವಿಗಳಿಗೆ ನೇರವಾಗಿ ಜಮೆ ಆಗುವ ಹಣದ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ…

13 hours ago

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸೂರಜ್ ಹೆಗ್ಡೆ ಅಂತ್ಯಕ್ರಿಯೆ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು…

14 hours ago

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ: ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಎಚ್‌ಡಿಕೆ

ವಿಶಾಖಪಟ್ಟಣ: ಇಲ್ಲಿನ ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ…

14 hours ago

ಮಂಡ್ಯ: ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. ತಂದೆ ಪ್ರಭಾಕರ್‌, ತಾಯಿ ಜ್ಯೋತಿ…

14 hours ago