ನವದೆಹಲಿ : ಛತ್ತೀಸ್ಗಡದ 2,000 ಕೋ.ರೂ.ಗಳ ಮದ್ಯ ಹಗರಣದಲ್ಲಿ ಇಬ್ಬರು ವ್ಯಕ್ತಿಗಳಿಗೆ ಮಂಗಳವಾರ ಮಧ್ಯಂತರ ರಕ್ಷಣೆಯನ್ನು ಮಂಜೂರು ಮಾಡಿದ ಸರ್ವೋಚ್ಚ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಈ.ಡಿ.) ಸ್ವಯಂ ಕಾನೂನಾಗಲು ಸಾಧ್ಯವಿಲ್ಲ ಎಂದು ಹೇಳಿತು.
ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ನೊಯ್ಡಾದಲ್ಲಿಯ ಹೊಸ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಅನಿಲ ತುತೇಜಾ ಮತ್ತು ಅವರ ಪುತ್ರ ಯಶ್ ತುತೇಜಾ ವಿರುದ್ಧ ಕ್ರಮವನ್ನು ತೆಗೆದುಕೊಳ್ಳದಂತೆ ಈ.ಡಿ. ಮತ್ತು ಉತ್ತರ ಪ್ರದೇಶ ಪೊಲೀಸರಿಗೆ ನಿರ್ದೇಶನ ನೀಡಿತು.
ರಾಜ್ಯ ಸರಕಾರದ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಇತರ ವ್ಯಕ್ತಿಗಳನ್ನೊಳಗೊಂಡ ಸಿಂಡಿಕೇಟ್ ಒಂದು ಸರಕಾರಿ ಸ್ವಾಮ್ಯದ ಕಂಪನಿಯು ಪ್ರತಿ ಕೇಸ್ ದೇಶಿ ಮದ್ಯಕ್ಕೆ 75 ರೂ.ಕಮಿಷನ್ ನೀಡುವವರಿಂದ ಮಾತ್ರ ಮದ್ಯವನ್ನು ಖರೀದಿಸುವಂತೆ ಸಂಚು ರೂಪಿಸಿದ್ದು, ತನ್ಮೂಲಕ ರಾಜ್ಯದ ಬೊಕ್ಕಸಕ್ಕೆ ಸೇರಬೇಕಿದ್ದ 2,000 ಕೋಟಿ ರೂ.ಗೂ ಅಧಿಕ ಹಣವನ್ನು ಲಪಟಾಯಿಸಿದೆ ಎಂದು ಈ.ಡಿ. ಆರೋಪಿಸಿದೆ.
ಪ್ರಕರಣದ ಅರ್ಜಿದಾರರಲ್ಲಿ ಒಂದಾಗಿರುವ ಛತ್ತೀಸ್ಗಡ ಸರಕಾರವು, ಈ.ಡಿ.ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರನ್ನು ಸಿಲುಕಿಸುವ ಉದ್ದೇಶದಿಂದ ಅಧಿಕಾರ ವ್ಯಾಪ್ತಿಯನ್ನು ಮೀರಿ ತನಿಖೆಯನ್ನು ನಡೆಸುತ್ತಿದೆ ಎಂದು ಪ್ರತಿಪಾದಿಸಿದೆ.
ಜು.18ರಂದು ಪ್ರಕರಣದಲ್ಲಿ ಈ.ಡಿ.ತನಿಖೆಗೆ ತಡೆಯಾಜ್ಞೆಯನ್ನು ನೀಡಿದ್ದ ಸರ್ವೋಚ್ಚ ನ್ಯಾಯಾಲಯವು, ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳದಂತೆ ತಾಕೀತು ಮಾಡಿತ್ತು.
ಆದರೆ ಜು.28ರಂದು ಈ.ಡಿ. ದೂರಿನ ಮೇರೆಗೆ ಉತ್ತರ ಪ್ರದೇಶ ಪೊಲೀಸರು ತುತೇಜಾ ಮತ್ತು ಅವರ ಪುತ್ರನ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…