ನವದೆಹಲಿ : ಛತ್ತೀಸ್ಗಡದ 2,000 ಕೋ.ರೂ.ಗಳ ಮದ್ಯ ಹಗರಣದಲ್ಲಿ ಇಬ್ಬರು ವ್ಯಕ್ತಿಗಳಿಗೆ ಮಂಗಳವಾರ ಮಧ್ಯಂತರ ರಕ್ಷಣೆಯನ್ನು ಮಂಜೂರು ಮಾಡಿದ ಸರ್ವೋಚ್ಚ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಈ.ಡಿ.) ಸ್ವಯಂ ಕಾನೂನಾಗಲು ಸಾಧ್ಯವಿಲ್ಲ ಎಂದು ಹೇಳಿತು.
ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ನೊಯ್ಡಾದಲ್ಲಿಯ ಹೊಸ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಅನಿಲ ತುತೇಜಾ ಮತ್ತು ಅವರ ಪುತ್ರ ಯಶ್ ತುತೇಜಾ ವಿರುದ್ಧ ಕ್ರಮವನ್ನು ತೆಗೆದುಕೊಳ್ಳದಂತೆ ಈ.ಡಿ. ಮತ್ತು ಉತ್ತರ ಪ್ರದೇಶ ಪೊಲೀಸರಿಗೆ ನಿರ್ದೇಶನ ನೀಡಿತು.
ರಾಜ್ಯ ಸರಕಾರದ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಇತರ ವ್ಯಕ್ತಿಗಳನ್ನೊಳಗೊಂಡ ಸಿಂಡಿಕೇಟ್ ಒಂದು ಸರಕಾರಿ ಸ್ವಾಮ್ಯದ ಕಂಪನಿಯು ಪ್ರತಿ ಕೇಸ್ ದೇಶಿ ಮದ್ಯಕ್ಕೆ 75 ರೂ.ಕಮಿಷನ್ ನೀಡುವವರಿಂದ ಮಾತ್ರ ಮದ್ಯವನ್ನು ಖರೀದಿಸುವಂತೆ ಸಂಚು ರೂಪಿಸಿದ್ದು, ತನ್ಮೂಲಕ ರಾಜ್ಯದ ಬೊಕ್ಕಸಕ್ಕೆ ಸೇರಬೇಕಿದ್ದ 2,000 ಕೋಟಿ ರೂ.ಗೂ ಅಧಿಕ ಹಣವನ್ನು ಲಪಟಾಯಿಸಿದೆ ಎಂದು ಈ.ಡಿ. ಆರೋಪಿಸಿದೆ.
ಪ್ರಕರಣದ ಅರ್ಜಿದಾರರಲ್ಲಿ ಒಂದಾಗಿರುವ ಛತ್ತೀಸ್ಗಡ ಸರಕಾರವು, ಈ.ಡಿ.ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರನ್ನು ಸಿಲುಕಿಸುವ ಉದ್ದೇಶದಿಂದ ಅಧಿಕಾರ ವ್ಯಾಪ್ತಿಯನ್ನು ಮೀರಿ ತನಿಖೆಯನ್ನು ನಡೆಸುತ್ತಿದೆ ಎಂದು ಪ್ರತಿಪಾದಿಸಿದೆ.
ಜು.18ರಂದು ಪ್ರಕರಣದಲ್ಲಿ ಈ.ಡಿ.ತನಿಖೆಗೆ ತಡೆಯಾಜ್ಞೆಯನ್ನು ನೀಡಿದ್ದ ಸರ್ವೋಚ್ಚ ನ್ಯಾಯಾಲಯವು, ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳದಂತೆ ತಾಕೀತು ಮಾಡಿತ್ತು.
ಆದರೆ ಜು.28ರಂದು ಈ.ಡಿ. ದೂರಿನ ಮೇರೆಗೆ ಉತ್ತರ ಪ್ರದೇಶ ಪೊಲೀಸರು ತುತೇಜಾ ಮತ್ತು ಅವರ ಪುತ್ರನ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…