BREAKING NEWS

ಈಡಿ ಸ್ವಯಂ ಕಾನೂನಾಗಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ : ಛತ್ತೀಸ್ಗಡದ 2,000 ಕೋ.ರೂ.ಗಳ ಮದ್ಯ ಹಗರಣದಲ್ಲಿ ಇಬ್ಬರು ವ್ಯಕ್ತಿಗಳಿಗೆ ಮಂಗಳವಾರ ಮಧ್ಯಂತರ ರಕ್ಷಣೆಯನ್ನು ಮಂಜೂರು ಮಾಡಿದ ಸರ್ವೋಚ್ಚ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಈ.ಡಿ.) ಸ್ವಯಂ ಕಾನೂನಾಗಲು ಸಾಧ್ಯವಿಲ್ಲ ಎಂದು ಹೇಳಿತು.

ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ನೊಯ್ಡಾದಲ್ಲಿಯ ಹೊಸ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಅನಿಲ ತುತೇಜಾ ಮತ್ತು ಅವರ ಪುತ್ರ ಯಶ್ ತುತೇಜಾ ವಿರುದ್ಧ ಕ್ರಮವನ್ನು ತೆಗೆದುಕೊಳ್ಳದಂತೆ ಈ.ಡಿ. ಮತ್ತು ಉತ್ತರ ಪ್ರದೇಶ ಪೊಲೀಸರಿಗೆ ನಿರ್ದೇಶನ ನೀಡಿತು.

ರಾಜ್ಯ ಸರಕಾರದ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಇತರ ವ್ಯಕ್ತಿಗಳನ್ನೊಳಗೊಂಡ ಸಿಂಡಿಕೇಟ್ ಒಂದು ಸರಕಾರಿ ಸ್ವಾಮ್ಯದ ಕಂಪನಿಯು ಪ್ರತಿ ಕೇಸ್ ದೇಶಿ ಮದ್ಯಕ್ಕೆ 75 ರೂ.ಕಮಿಷನ್ ನೀಡುವವರಿಂದ ಮಾತ್ರ ಮದ್ಯವನ್ನು ಖರೀದಿಸುವಂತೆ ಸಂಚು ರೂಪಿಸಿದ್ದು, ತನ್ಮೂಲಕ ರಾಜ್ಯದ ಬೊಕ್ಕಸಕ್ಕೆ ಸೇರಬೇಕಿದ್ದ 2,000 ಕೋಟಿ ರೂ.ಗೂ ಅಧಿಕ ಹಣವನ್ನು ಲಪಟಾಯಿಸಿದೆ ಎಂದು ಈ.ಡಿ. ಆರೋಪಿಸಿದೆ.

ಪ್ರಕರಣದ ಅರ್ಜಿದಾರರಲ್ಲಿ ಒಂದಾಗಿರುವ ಛತ್ತೀಸ್ಗಡ ಸರಕಾರವು, ಈ.ಡಿ.ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರನ್ನು ಸಿಲುಕಿಸುವ ಉದ್ದೇಶದಿಂದ ಅಧಿಕಾರ ವ್ಯಾಪ್ತಿಯನ್ನು ಮೀರಿ ತನಿಖೆಯನ್ನು ನಡೆಸುತ್ತಿದೆ ಎಂದು ಪ್ರತಿಪಾದಿಸಿದೆ.

ಜು.18ರಂದು ಪ್ರಕರಣದಲ್ಲಿ ಈ.ಡಿ.ತನಿಖೆಗೆ ತಡೆಯಾಜ್ಞೆಯನ್ನು ನೀಡಿದ್ದ ಸರ್ವೋಚ್ಚ ನ್ಯಾಯಾಲಯವು, ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳದಂತೆ ತಾಕೀತು ಮಾಡಿತ್ತು.

ಆದರೆ ಜು.28ರಂದು ಈ.ಡಿ. ದೂರಿನ ಮೇರೆಗೆ ಉತ್ತರ ಪ್ರದೇಶ ಪೊಲೀಸರು ತುತೇಜಾ ಮತ್ತು ಅವರ ಪುತ್ರನ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.

andolanait

Recent Posts

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

15 mins ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

1 hour ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

6 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

8 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

9 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

10 hours ago