BREAKING NEWS

ಸಿಸೋಡಿಯಾ 14 ಫೋನ್‌ ನಾಶಪಡಿಸಿದ್ದಾರೆಂದು ED ಸುಳ್ಳು ಹೇಳುತ್ತಿದೆ: ಆಪ್‌ ನಾಯಕ

ದೆಹಲಿ : ಸಾಕ್ಷ್ಯಗಳನ್ನು ಮುಚ್ಚಿ ಹಾಕುವ ಉದ್ದೇಶದಿಂದ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಡಿಜಿಟಲ್ ಸಾಕ್ಷ್ಯಗಳನ್ನು(ಫೋನ್‌) ನಾಶ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ(ಇ.ಡಿ) ನ್ಯಾಯಾಲಯಕ್ಕೆ ಸುಳ್ಳು ಹೇಳುತ್ತಿದೆ ಎಂದು ಆಮ್‌ ಆದ್ಮಿ ಪಕ್ಷದ ಹಿರಿಯ ನಾಯಕ ಸಂಜಯ್‌ ಸಿಂಗ್ ಆರೋಪಿಸಿದ್ದಾರೆ.

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧ‍‍ಪಟ್ಟಂತೆ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಮನೀಶ್‌ ಸಿಸೋಡಿಯ ಬಂಧಿತರಾಗಿದ್ದು, ಜಾರಿ ನಿರ್ದೇಶನಾಲಯ ಹಗರಣದ ತನಿಖೆ ನಡೆಸುತ್ತಿದೆ. ‘ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಸಿಸೋಡಿಯಾ ಡಿಜಿಟಲ್‌ ಸಾಕ್ಷ್ಯ ನಾಶ ಮಾಡಿದ್ದಾರೆ. ಹಲವು ಪೋನ್‌ಗಳನ್ನು ಬದಲಾಯಿಸಿದ್ದಲ್ಲದೆ ಸುಮಾರು 14 ಪೋನ್‌ಗಳನ್ನು ನಾಶ ಮಾಡಿದ್ದಾರೆ‘ ಎಂದು ಇ.ಡಿ ನ್ಯಾಯಾಲಯಕ್ಕೆ ತಿಳಿಸಿತ್ತು.

‘ಪ್ರತಿ ಬಾರಿಯೂ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಸುಳ್ಳು ಹೇಳುತ್ತಿದೆ. 14 ಫೋನ್‌ಗಳನ್ನು ಸಿಸೋಡಿಯಾ ನಾಶ ಮಾಡಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ. ಸಿಸೋಡಿಯಾ ಯಾವ ಫೋನ್‌ಅನ್ನು ಕೂಡ ನಾಶ ಪಡಿಸಿಲ್ಲ. 14ರಲ್ಲಿ ಐದು ಫೋನ್‌ ಇಡಿ ಮತ್ತು ಸಿಬಿಐ ವಶಪಡಿಸಿಕೊಂಡಿದೆ‘ ಎಂದು ಸಂಜಯ್‌ ಸಿಂಗ್ ಹೇಳಿದ್ದಾರೆ.

ತನಿಖಾ ಸಂಸ್ಥೆಯ ವಿರುದ್ಧ ವಾಗ್ದಾಳಿ ನಡೆಸಿದ ಸಿಂಗ್, ‘ಎಲ್ಲ 14 ಫೋನ್‌ಗಳು ಕೆಲಸ ಮಾಡುತ್ತಿವೆ. 14ರಲ್ಲಿ ಐದು ಫೋನ್‌ಗಳನ್ನು ಇಡಿ ಮತ್ತು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಇಡಿ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜಾರಿ ನಿರ್ದೇಶನಾಲಯ ಪಟ್ಟಿ ಮಾಡಿರುವ ಫೋನ್ ಸಂಖ್ಯೆಗಳಲ್ಲಿ ಸಿಸೋಡಿಯಾ ಅವರ ಮನೆ ಸಹಾಯಕರು, ಚಾಲಕ ಮತ್ತು ಇತರ ಸಿಬ್ಬಂದಿಗೆ ಸೇರಿದ ಫೋನ್ ಸಂಖ್ಯೆಗಳು ಕೂಡ ಸೇರಿವೆ‘ ಎಂದು ಆರೋಪಿಸಿದ್ದಾರೆ.

‘ಈ ರೀತಿ ಸುಳ್ಳು ಆಪಾದನೆ ಮಾಡುವ ಮೂಲಕ ತನಿಖಾ ಸಂಸ್ಥೆಗಳನ್ನೇ ಅ‍ಪಹಾಸ್ಯ ಮಾಡಲಾಗುತ್ತಿದೆ. 14 ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿ ನಾಯಕರು ಮತ್ತು ದೆಹಲಿಯ ಅತ್ಯುತ್ತಮ ಶಿಕ್ಷಣ ಸಚಿವರನ್ನು ದೂಷಿಸುತ್ತಿರುವ ಇ.ಡಿ ಅಧಿಕಾರಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು‘ ಎಂದು ಒತ್ತಾಯಿಸಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago