BREAKING NEWS

ಸಿಸೋಡಿಯಾ 14 ಫೋನ್‌ ನಾಶಪಡಿಸಿದ್ದಾರೆಂದು ED ಸುಳ್ಳು ಹೇಳುತ್ತಿದೆ: ಆಪ್‌ ನಾಯಕ

ದೆಹಲಿ : ಸಾಕ್ಷ್ಯಗಳನ್ನು ಮುಚ್ಚಿ ಹಾಕುವ ಉದ್ದೇಶದಿಂದ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಡಿಜಿಟಲ್ ಸಾಕ್ಷ್ಯಗಳನ್ನು(ಫೋನ್‌) ನಾಶ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ(ಇ.ಡಿ) ನ್ಯಾಯಾಲಯಕ್ಕೆ ಸುಳ್ಳು ಹೇಳುತ್ತಿದೆ ಎಂದು ಆಮ್‌ ಆದ್ಮಿ ಪಕ್ಷದ ಹಿರಿಯ ನಾಯಕ ಸಂಜಯ್‌ ಸಿಂಗ್ ಆರೋಪಿಸಿದ್ದಾರೆ.

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧ‍‍ಪಟ್ಟಂತೆ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಮನೀಶ್‌ ಸಿಸೋಡಿಯ ಬಂಧಿತರಾಗಿದ್ದು, ಜಾರಿ ನಿರ್ದೇಶನಾಲಯ ಹಗರಣದ ತನಿಖೆ ನಡೆಸುತ್ತಿದೆ. ‘ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಸಿಸೋಡಿಯಾ ಡಿಜಿಟಲ್‌ ಸಾಕ್ಷ್ಯ ನಾಶ ಮಾಡಿದ್ದಾರೆ. ಹಲವು ಪೋನ್‌ಗಳನ್ನು ಬದಲಾಯಿಸಿದ್ದಲ್ಲದೆ ಸುಮಾರು 14 ಪೋನ್‌ಗಳನ್ನು ನಾಶ ಮಾಡಿದ್ದಾರೆ‘ ಎಂದು ಇ.ಡಿ ನ್ಯಾಯಾಲಯಕ್ಕೆ ತಿಳಿಸಿತ್ತು.

‘ಪ್ರತಿ ಬಾರಿಯೂ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಸುಳ್ಳು ಹೇಳುತ್ತಿದೆ. 14 ಫೋನ್‌ಗಳನ್ನು ಸಿಸೋಡಿಯಾ ನಾಶ ಮಾಡಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ. ಸಿಸೋಡಿಯಾ ಯಾವ ಫೋನ್‌ಅನ್ನು ಕೂಡ ನಾಶ ಪಡಿಸಿಲ್ಲ. 14ರಲ್ಲಿ ಐದು ಫೋನ್‌ ಇಡಿ ಮತ್ತು ಸಿಬಿಐ ವಶಪಡಿಸಿಕೊಂಡಿದೆ‘ ಎಂದು ಸಂಜಯ್‌ ಸಿಂಗ್ ಹೇಳಿದ್ದಾರೆ.

ತನಿಖಾ ಸಂಸ್ಥೆಯ ವಿರುದ್ಧ ವಾಗ್ದಾಳಿ ನಡೆಸಿದ ಸಿಂಗ್, ‘ಎಲ್ಲ 14 ಫೋನ್‌ಗಳು ಕೆಲಸ ಮಾಡುತ್ತಿವೆ. 14ರಲ್ಲಿ ಐದು ಫೋನ್‌ಗಳನ್ನು ಇಡಿ ಮತ್ತು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಇಡಿ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜಾರಿ ನಿರ್ದೇಶನಾಲಯ ಪಟ್ಟಿ ಮಾಡಿರುವ ಫೋನ್ ಸಂಖ್ಯೆಗಳಲ್ಲಿ ಸಿಸೋಡಿಯಾ ಅವರ ಮನೆ ಸಹಾಯಕರು, ಚಾಲಕ ಮತ್ತು ಇತರ ಸಿಬ್ಬಂದಿಗೆ ಸೇರಿದ ಫೋನ್ ಸಂಖ್ಯೆಗಳು ಕೂಡ ಸೇರಿವೆ‘ ಎಂದು ಆರೋಪಿಸಿದ್ದಾರೆ.

‘ಈ ರೀತಿ ಸುಳ್ಳು ಆಪಾದನೆ ಮಾಡುವ ಮೂಲಕ ತನಿಖಾ ಸಂಸ್ಥೆಗಳನ್ನೇ ಅ‍ಪಹಾಸ್ಯ ಮಾಡಲಾಗುತ್ತಿದೆ. 14 ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿ ನಾಯಕರು ಮತ್ತು ದೆಹಲಿಯ ಅತ್ಯುತ್ತಮ ಶಿಕ್ಷಣ ಸಚಿವರನ್ನು ದೂಷಿಸುತ್ತಿರುವ ಇ.ಡಿ ಅಧಿಕಾರಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು‘ ಎಂದು ಒತ್ತಾಯಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

31 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

32 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

34 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

35 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

40 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

46 mins ago