BREAKING NEWS

ಇಡಿ ನೊಟೀಸ್ : ಕರ್ನಾಟಕದ ಅತಿ ಶ್ರೀಮಂತ ಚುನಾವಣಾ ಅಭ್ಯರ್ಥಿ ಕೆಜಿಎಫ್ ಬಾಬುಗೆ ಇಂದು ವಿಚಾರಣೆ ಸಾಧ್ಯತೆ

ಬೆಂಗಳೂರು : ಕೆಜಿಎಫ್ ಬಾಬು ಎಂದೇ ಖ್ಯಾತರಾಗಿರುವ ಯೂಸುಫ್ ಷರೀಫ್ ಇಂದು ಬುಧವಾರ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ (ED) ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಯೂಸುಫ್ ಷರೀಫ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ನಂತರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕರ್ನಾಟಕ ಅತ್ಯಂತ ಶ್ರೀಮಂತ ಅಭ್ಯರ್ಥಿಗಳಲ್ಲೊಬ್ಬರು ಕೆಜಿಎಫ್ ಬಾಬು.

ಕೆಜಿಎಫ್ ಬಾಬು ನಿನ್ನೆ ರಾತ್ರಿ ದೆಹಲಿ ತಲುಪಿದ್ದು, ವಿಚಾರಣೆಗಾಗಿ ಇಡಿ ಮುಂದೆ ಇಂದು ಹಾಜರಾಗುವ ನಿರೀಕ್ಷೆಯಿದೆ. ಇವರು ಚುನಾವಣೆಗೆ ಮುನ್ನ ಆದಾಯ ತೆರಿಗೆ (I-T) ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದರು. ಮತದಾರರನ್ನು ನಗದು ನೀಡಿ ಖರೀದಿಸಲು ಯತ್ನಿಸಿದ ಆರೋಪದ ನಡುವೆಯೇ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿ ಮತದಾರರ ಗುರುತು ಚೀಟಿಗಳಲ್ಲದೆ ಬೆಲೆಬಾಳುವ ವಸ್ತುಗಳು ಮತ್ತು ಚೆಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆಜಿಎಫ್ ಬಾಬು ಈ ಬಾರಿ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸಿ ಮೂರನೇ ಸ್ಥಾನ ಗಳಿಸಿದ್ದರು. ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ 1,600 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು. ಕೋಲಾರ ಮೂಲದ ಬಾಬು ರೈಲ್ವೇ ಸ್ಕ್ರ್ಯಾಪ್ ಮಾರಾಟ ಮಾಡಿ ಆಗರ್ಭ ಶ್ರೀಮಂತರಾದರು ಎಂದು ಹೇಳಲಾಗುತ್ತಿದೆ.

lokesh

Recent Posts

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

39 mins ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

1 hour ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

1 hour ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

1 hour ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

2 hours ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

2 hours ago