ಬೆಂಗಳೂರು : ಕೆಜಿಎಫ್ ಬಾಬು ಎಂದೇ ಖ್ಯಾತರಾಗಿರುವ ಯೂಸುಫ್ ಷರೀಫ್ ಇಂದು ಬುಧವಾರ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ (ED) ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಯೂಸುಫ್ ಷರೀಫ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ನಂತರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕರ್ನಾಟಕ ಅತ್ಯಂತ ಶ್ರೀಮಂತ ಅಭ್ಯರ್ಥಿಗಳಲ್ಲೊಬ್ಬರು ಕೆಜಿಎಫ್ ಬಾಬು.
ಕೆಜಿಎಫ್ ಬಾಬು ನಿನ್ನೆ ರಾತ್ರಿ ದೆಹಲಿ ತಲುಪಿದ್ದು, ವಿಚಾರಣೆಗಾಗಿ ಇಡಿ ಮುಂದೆ ಇಂದು ಹಾಜರಾಗುವ ನಿರೀಕ್ಷೆಯಿದೆ. ಇವರು ಚುನಾವಣೆಗೆ ಮುನ್ನ ಆದಾಯ ತೆರಿಗೆ (I-T) ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದರು. ಮತದಾರರನ್ನು ನಗದು ನೀಡಿ ಖರೀದಿಸಲು ಯತ್ನಿಸಿದ ಆರೋಪದ ನಡುವೆಯೇ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿ ಮತದಾರರ ಗುರುತು ಚೀಟಿಗಳಲ್ಲದೆ ಬೆಲೆಬಾಳುವ ವಸ್ತುಗಳು ಮತ್ತು ಚೆಕ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಜಿಎಫ್ ಬಾಬು ಈ ಬಾರಿ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸಿ ಮೂರನೇ ಸ್ಥಾನ ಗಳಿಸಿದ್ದರು. ಅವರು ತಮ್ಮ ಚುನಾವಣಾ ಅಫಿಡವಿಟ್ನಲ್ಲಿ 1,600 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು. ಕೋಲಾರ ಮೂಲದ ಬಾಬು ರೈಲ್ವೇ ಸ್ಕ್ರ್ಯಾಪ್ ಮಾರಾಟ ಮಾಡಿ ಆಗರ್ಭ ಶ್ರೀಮಂತರಾದರು ಎಂದು ಹೇಳಲಾಗುತ್ತಿದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…