BREAKING NEWS

ಲಂಡನ್‌ ಮಾರುಕಟ್ಟೆಯಲ್ಲಿ ದರ ಹೆಚ್ಚಳ ಪರಿಣಾಮ: ರೊಬಸ್ಟಾ ಕಾಫಿ ಬೆಲೆ 6 ಸಾವಿರಕ್ಕೆ ಏರಿಕೆ

ಚಿಕ್ಕಮಗಳೂರು : ಸತತವಾಗಿ ಏರಿಕೆ ಕಾಣುತ್ತಿರುವ ರೊಬಸ್ಟಾ ಕಾಫಿ ದರವು ಹೊಸ ದಾಖಲೆ ಬರೆದಿದೆ. 50 ಕೆ.ಜಿ ತೂಕದ ರೊಬಸ್ಟಾ ಚೆರ್ರಿ ಮೂಟೆಯೊಂದಕ್ಕೆ ₹ 6 ಸಾವಿರ ಧಾರಣೆ ಬಂದಿದ್ದು, ಇದು ಸಾರ್ವಕಾಲಿಕ ಗರಿಷ್ಠ ಬೆಲೆಯಾಗಿದೆ.

ಲಂಡನ್ ಮಾರುಕಟೆಯಲ್ಲಿ ರೊಬಸ್ಟಾ ಕಾಫಿ ಬೀನ್ಸ್‌ ಟನ್‌ಗೆ 2,411 ಡಾಲರ್ ಆಸುಪಾಸಿನಲ್ಲಿ ಶುಕ್ರವಾರ ಮಾರಾಟವಾಗಿದೆ. ಪರಿಣಾಮ ಸ್ಥಳೀಯ ಕಾಫಿ ಮಾರುಕಟ್ಟೆಯಲ್ಲೂ ಧಾರಣೆ ಮತ್ತು ಬೇಡಿಕೆ ಹೆಚ್ಚಳವಾಗಿದೆ. ಸದ್ಯ 1 ಕೆ.ಜಿ ರೊಬಸ್ಟಾ ಕಾಫಿ ಬೀನ್ಸ್‌ಗೆ ₹ 220 ದರ ಇದೆ.

ಕಳಸ ತಾಲ್ಲೂಕಿನಲ್ಲಿ ಈ ವರ್ಷದ ಕಾಫಿ ಫಸಲು ಶೇ 30ರಷ್ಟು ಕಡಿಮೆ ಇದೆ. ಜನವರಿಯಲ್ಲಿ ಬೆಲೆ ₹5 ಸಾವಿರ ತಲುಪಿದಾಗ ಬಹುತೇಕ ಬೆಳೆಗಾರರು ಕಾಫಿ ಮಾರಿದ್ದಾರೆ. ಸದ್ಯ ಕೆಲವೇ ಬೆಳೆಗಾರರಲ್ಲಿ ಫಸಲು ಉಳಿದಿದ್ದು, ಅವರೂ ಬೆಲೆ ಇನ್ನಷ್ಟು ಏರುವ ನಿರೀಕ್ಷೆಯಲ್ಲಿದ್ದಾರೆ.

ರೊಬಸ್ಟಾ ಕಾಫಿ ಬೆಳೆಯುವ ಇಂಡೊನೇಷ್ಯಾ, ವಿಯಟ್ನಾಂ ಹಾಗೂ ಅರೇಬಿಕಾ ಕಾಫಿ ತಳಿ ಬೆಳೆಯುವ ಬ್ರೆಜಿಲ್‌ನಲ್ಲಿ ಈ ಬಾರಿ ಪ್ರತಿಕೂಲ ಹವಾಮಾನದಿಂದ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಪೂರೈಕೆ ಕುಗ್ಗಿದ್ದು, ಬೆಲೆ ಸತತವಾಗಿ ಏರುತ್ತಲೇ ಇದೆ ಎನ್ನುತ್ತಾರೆ ಕಾಫಿ ವ್ಯಾಪಾರಿಗಳು.

‘ಸದ್ಯಕ್ಕೆ ಬೆಳೆಗಾರರ ಕೈಯಲ್ಲಿ ಶೇ 10ರಷ್ಟು ಪ್ರಮಾಣದ ಕಾಫಿಯೂ ಉಳಿದಿಲ್ಲ. ಬೆಲೆ ಏರುತ್ತಿದ್ದರೂ, ಅದರ ಲಾಭ ಪಡೆಯಲು ನಮ್ಮಂತಹ ಬೆಳೆಗಾರರಿಗೆ ಆಗುತ್ತಿಲ್ಲ’ ಎಂದು ಸಣ್ಣ ಪ್ರಮಾಣದಲ್ಲಿ ಕಾಫಿ ಬೆಳೆಯುವ ಬೆಳೆಗಾರರು ಬೇಸರ ವ್ಯಕ್ತಪಡಿಸಿದರು.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

11 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

12 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago