BREAKING NEWS

ಲಂಡನ್‌ ಮಾರುಕಟ್ಟೆಯಲ್ಲಿ ದರ ಹೆಚ್ಚಳ ಪರಿಣಾಮ: ರೊಬಸ್ಟಾ ಕಾಫಿ ಬೆಲೆ 6 ಸಾವಿರಕ್ಕೆ ಏರಿಕೆ

ಚಿಕ್ಕಮಗಳೂರು : ಸತತವಾಗಿ ಏರಿಕೆ ಕಾಣುತ್ತಿರುವ ರೊಬಸ್ಟಾ ಕಾಫಿ ದರವು ಹೊಸ ದಾಖಲೆ ಬರೆದಿದೆ. 50 ಕೆ.ಜಿ ತೂಕದ ರೊಬಸ್ಟಾ ಚೆರ್ರಿ ಮೂಟೆಯೊಂದಕ್ಕೆ ₹ 6 ಸಾವಿರ ಧಾರಣೆ ಬಂದಿದ್ದು, ಇದು ಸಾರ್ವಕಾಲಿಕ ಗರಿಷ್ಠ ಬೆಲೆಯಾಗಿದೆ.

ಲಂಡನ್ ಮಾರುಕಟೆಯಲ್ಲಿ ರೊಬಸ್ಟಾ ಕಾಫಿ ಬೀನ್ಸ್‌ ಟನ್‌ಗೆ 2,411 ಡಾಲರ್ ಆಸುಪಾಸಿನಲ್ಲಿ ಶುಕ್ರವಾರ ಮಾರಾಟವಾಗಿದೆ. ಪರಿಣಾಮ ಸ್ಥಳೀಯ ಕಾಫಿ ಮಾರುಕಟ್ಟೆಯಲ್ಲೂ ಧಾರಣೆ ಮತ್ತು ಬೇಡಿಕೆ ಹೆಚ್ಚಳವಾಗಿದೆ. ಸದ್ಯ 1 ಕೆ.ಜಿ ರೊಬಸ್ಟಾ ಕಾಫಿ ಬೀನ್ಸ್‌ಗೆ ₹ 220 ದರ ಇದೆ.

ಕಳಸ ತಾಲ್ಲೂಕಿನಲ್ಲಿ ಈ ವರ್ಷದ ಕಾಫಿ ಫಸಲು ಶೇ 30ರಷ್ಟು ಕಡಿಮೆ ಇದೆ. ಜನವರಿಯಲ್ಲಿ ಬೆಲೆ ₹5 ಸಾವಿರ ತಲುಪಿದಾಗ ಬಹುತೇಕ ಬೆಳೆಗಾರರು ಕಾಫಿ ಮಾರಿದ್ದಾರೆ. ಸದ್ಯ ಕೆಲವೇ ಬೆಳೆಗಾರರಲ್ಲಿ ಫಸಲು ಉಳಿದಿದ್ದು, ಅವರೂ ಬೆಲೆ ಇನ್ನಷ್ಟು ಏರುವ ನಿರೀಕ್ಷೆಯಲ್ಲಿದ್ದಾರೆ.

ರೊಬಸ್ಟಾ ಕಾಫಿ ಬೆಳೆಯುವ ಇಂಡೊನೇಷ್ಯಾ, ವಿಯಟ್ನಾಂ ಹಾಗೂ ಅರೇಬಿಕಾ ಕಾಫಿ ತಳಿ ಬೆಳೆಯುವ ಬ್ರೆಜಿಲ್‌ನಲ್ಲಿ ಈ ಬಾರಿ ಪ್ರತಿಕೂಲ ಹವಾಮಾನದಿಂದ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಪೂರೈಕೆ ಕುಗ್ಗಿದ್ದು, ಬೆಲೆ ಸತತವಾಗಿ ಏರುತ್ತಲೇ ಇದೆ ಎನ್ನುತ್ತಾರೆ ಕಾಫಿ ವ್ಯಾಪಾರಿಗಳು.

‘ಸದ್ಯಕ್ಕೆ ಬೆಳೆಗಾರರ ಕೈಯಲ್ಲಿ ಶೇ 10ರಷ್ಟು ಪ್ರಮಾಣದ ಕಾಫಿಯೂ ಉಳಿದಿಲ್ಲ. ಬೆಲೆ ಏರುತ್ತಿದ್ದರೂ, ಅದರ ಲಾಭ ಪಡೆಯಲು ನಮ್ಮಂತಹ ಬೆಳೆಗಾರರಿಗೆ ಆಗುತ್ತಿಲ್ಲ’ ಎಂದು ಸಣ್ಣ ಪ್ರಮಾಣದಲ್ಲಿ ಕಾಫಿ ಬೆಳೆಯುವ ಬೆಳೆಗಾರರು ಬೇಸರ ವ್ಯಕ್ತಪಡಿಸಿದರು.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

7 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

7 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

8 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

9 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

9 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

10 hours ago