BREAKING NEWS

ಪ್ರಧಾನಿ ಮೋದಿಗೆ ಈಜಿಪ್ಟ್ ನ ಅತ್ಯುನ್ನತ ‘ಆರ್ಡರ್ ಆಫ್ ದಿ ನೈಲ್’ ಪ್ರಶಸ್ತಿ ಪ್ರದಾನ

ಕೈರೋ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಈಜಿಪ್ಟ್ ನ ಅತ್ಯುನ್ನತ ‘ಆರ್ಡರ್ ಆಫ್ ದಿ ನೈಲ್’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ತಮ್ಮ ದ್ವಿಪಕ್ಷೀಯ ಸಭೆಯ ಮೊದಲು ಮೋದಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉಭಯ ನಾಯಕರು ತಮ್ಮ ಸಭೆಯಲ್ಲಿ ಮಹತ್ವದ ತಿಳುವಳಿಕೆ ಪತ್ರಗಳಿಗೆ (ಎಂಒಯು) ಸಹಿ ಹಾಕಿದರು. 1997 ರ ನಂತರ ಈಜಿಪ್ಟ್ ಗೆ ಭಾರತದ ಪ್ರಧಾನಿಯ ಮೊದಲ ಭೇಟಿ ಇದಾಗಿದೆ.

ಶನಿವಾರ ಕೈರೋದಲ್ಲಿರುವ ದೇಶದ 11 ನೇ ಶತಮಾನದ ಅಲ್-ಹಕೀಮ್ ಮಸೀದಿಗೆ ಮೋದಿ ಭೇಟಿ ನೀಡಿದರು. ಇದನ್ನು ಭಾರತದ ದಾವೂದಿ ಬೊಹ್ರಾ ಸಮುದಾಯದ ನೆರವಿನಿಂದ ಪುನರ್ ನಿರ್ಮಾಣ ಮಾಡಲಾಗಿದೆ. ಮೂರು ತಿಂಗಳ ಹಿಂದಷ್ಟೇ ಪೂರ್ಣಗೊಂಡ ಮಸೀದಿಯನ್ನು ಮೋದಿಗೆ ತೋರಿಸಲಾಯಿತು. ಅಲ್ ಹಕೀಮ್ ಕೈರೋದಲ್ಲಿನ ನಾಲ್ಕನೇ ಅತ್ಯಂತ ಹಳೆಯ ಮಸೀದಿ ಮತ್ತು ಈಜಿಪ್ಟ್ ರಾಜಧಾನಿಯಲ್ಲಿ ನಿರ್ಮಿಸಲಾದ ಎರಡನೇ ಫಾತಿಮಿಡ್ ಮಸೀದಿಯಾಗಿದೆ. ಇದು 13,560 ಚದರ ಮೀಟರ್‌ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ.

ನಂತರ, ಹೆಲಿಯೊಪೊಲಿಸ್ ಕಾಮನ್‌ವೆಲ್ತ್ ಯುದ್ಧದ ಸ್ಮಶಾನಕ್ಕೂ ಭೇಟಿ ನೀಡಿದ ಪ್ರಧಾನ ಮಂತ್ರಿ, ಮೊದಲ ವಿಶ್ವಯುದ್ಧದ ಸಮಯದಲ್ಲಿ ಈಜಿಪ್ಟ್ ಮತ್ತು ಪ್ಯಾಲೆಸ್ತೀನ್‌ನಲ್ಲಿ ವೀರಾವೇಶದಿಂದ ಹೋರಾಡಿ ತಮ್ಮ ಪ್ರಾಣವನ್ನು ಅರ್ಪಿಸಿದ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಿದರು. ಈ ಸ್ಮಾರಕವನ್ನು ಮೊದಲ ವಿಶ್ವ ಸಮರದಲ್ಲಿ ಈಜಿಪ್ಟ್ ಮತ್ತು ಪ್ಯಾಲೆಸ್ತೀನ್‌ನಲ್ಲಿ ಹೋರಾಡಿ ಮಡಿದ ಸುಮಾರು 4,000 ಭಾರತೀಯ ಸೈನಿಕರ ಸ್ಮರಣಾರ್ಥ ನಿರ್ಮಿಸಲಾಗಿದೆ

andolanait

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

4 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

4 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

4 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

4 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

4 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

4 hours ago