ಕೈರೋ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಈಜಿಪ್ಟ್ ನ ಅತ್ಯುನ್ನತ ‘ಆರ್ಡರ್ ಆಫ್ ದಿ ನೈಲ್’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ತಮ್ಮ ದ್ವಿಪಕ್ಷೀಯ ಸಭೆಯ ಮೊದಲು ಮೋದಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಉಭಯ ನಾಯಕರು ತಮ್ಮ ಸಭೆಯಲ್ಲಿ ಮಹತ್ವದ ತಿಳುವಳಿಕೆ ಪತ್ರಗಳಿಗೆ (ಎಂಒಯು) ಸಹಿ ಹಾಕಿದರು. 1997 ರ ನಂತರ ಈಜಿಪ್ಟ್ ಗೆ ಭಾರತದ ಪ್ರಧಾನಿಯ ಮೊದಲ ಭೇಟಿ ಇದಾಗಿದೆ.
ಶನಿವಾರ ಕೈರೋದಲ್ಲಿರುವ ದೇಶದ 11 ನೇ ಶತಮಾನದ ಅಲ್-ಹಕೀಮ್ ಮಸೀದಿಗೆ ಮೋದಿ ಭೇಟಿ ನೀಡಿದರು. ಇದನ್ನು ಭಾರತದ ದಾವೂದಿ ಬೊಹ್ರಾ ಸಮುದಾಯದ ನೆರವಿನಿಂದ ಪುನರ್ ನಿರ್ಮಾಣ ಮಾಡಲಾಗಿದೆ. ಮೂರು ತಿಂಗಳ ಹಿಂದಷ್ಟೇ ಪೂರ್ಣಗೊಂಡ ಮಸೀದಿಯನ್ನು ಮೋದಿಗೆ ತೋರಿಸಲಾಯಿತು. ಅಲ್ ಹಕೀಮ್ ಕೈರೋದಲ್ಲಿನ ನಾಲ್ಕನೇ ಅತ್ಯಂತ ಹಳೆಯ ಮಸೀದಿ ಮತ್ತು ಈಜಿಪ್ಟ್ ರಾಜಧಾನಿಯಲ್ಲಿ ನಿರ್ಮಿಸಲಾದ ಎರಡನೇ ಫಾತಿಮಿಡ್ ಮಸೀದಿಯಾಗಿದೆ. ಇದು 13,560 ಚದರ ಮೀಟರ್ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ.
ನಂತರ, ಹೆಲಿಯೊಪೊಲಿಸ್ ಕಾಮನ್ವೆಲ್ತ್ ಯುದ್ಧದ ಸ್ಮಶಾನಕ್ಕೂ ಭೇಟಿ ನೀಡಿದ ಪ್ರಧಾನ ಮಂತ್ರಿ, ಮೊದಲ ವಿಶ್ವಯುದ್ಧದ ಸಮಯದಲ್ಲಿ ಈಜಿಪ್ಟ್ ಮತ್ತು ಪ್ಯಾಲೆಸ್ತೀನ್ನಲ್ಲಿ ವೀರಾವೇಶದಿಂದ ಹೋರಾಡಿ ತಮ್ಮ ಪ್ರಾಣವನ್ನು ಅರ್ಪಿಸಿದ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಿದರು. ಈ ಸ್ಮಾರಕವನ್ನು ಮೊದಲ ವಿಶ್ವ ಸಮರದಲ್ಲಿ ಈಜಿಪ್ಟ್ ಮತ್ತು ಪ್ಯಾಲೆಸ್ತೀನ್ನಲ್ಲಿ ಹೋರಾಡಿ ಮಡಿದ ಸುಮಾರು 4,000 ಭಾರತೀಯ ಸೈನಿಕರ ಸ್ಮರಣಾರ್ಥ ನಿರ್ಮಿಸಲಾಗಿದೆ
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…