BREAKING NEWS

56 ರಾಜ್ಯಸಭೆ ಸ್ಥಾನಗಳ ಚುನಾವಣೆ ದಿನಾಂಕ ಘೋಷಣೆ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಆಯೋಗವು ಚುನಾವಣೆಯ ದಿನಾಂಕವನ್ನು ಯಾವಾಗ ಘೋಷಿಸಲಿದೆ ಎಂಬ ಕುತೂಹಲ ರಾಜಕೀಯ ಪ್ರಿಯರಲ್ಲಿ ಇರುವಾಗಲೇ ಕೇಂದ್ರ ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯ ದಿನಾಂಕವನ್ನು ಘೋಷಿಸಿದೆ.

15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 15 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಎಂದು ಘೋಷಿಸಲಾಗಿದೆ. ಫೆಬ್ರವರಿ 27ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ತಿಳಿಸಲಾಗಿದೆ.

ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ ಒಟ್ಟು 56 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಯಾವ ರಾಜ್ಯದ ಎಷ್ಟು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂಬ ಪಟ್ಟಿ ಈ ಕೆಳಕಂಡಂತಿದೆ..

ಕರ್ನಾಟಕ – 4 ಸ್ಥಾನ
ಆಂಧ್ರಪ್ರದೇಶ – 3 ಸ್ಥಾನ
ಬಿಹಾರ – 6 ಸ್ಥಾನ
ಛತ್ತೀಸ್‌ಗಢ – 1 ಸ್ಥಾನ
ಗುಜರಾತ್ – ‌4 ಸ್ಥಾನ
ಹರಿಯಾಣ – 1 ಸ್ಥಾನ
ಹಿಮಾಚಲ ಪ್ರದೇಶ – 1 ಸ್ಥಾನ
ಮಧ್ಯಪ್ರದೇಶ – 5 ಸ್ಥಾನ
ಮಹಾರಾಷ್ಟ್ರ – 6 ಸ್ಥಾನ
ತೆಲಂಗಾಣ -3 ಸ್ಥಾನ
ಉತ್ತರ ಪ್ರದೇಶ – 10 ಸ್ಥಾನ
ಉತ್ತರಾಖಂಡ – 1 ಸ್ಥಾನ
ಪಶ್ಚಿಮ ಬಂಗಾಳ – 5 ಸ್ಥಾನ
ಒಡಿಶಾ – 3 ಸ್ಥಾನ
ರಾಜಸ್ಥಾನ -3 ಸ್ಥಾನ
ಒಟ್ಟು 56

andolana

Recent Posts

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

15 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

38 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

53 mins ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago

ಓದುಗರ ಪತ್ರ: ನಾರಾಯಣಸ್ವಾಮಿಯವರು ಜವಾಬ್ದಾರಿಯುತವಾಗಿ ವರ್ತಿಸಲಿ

ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…

4 hours ago