BREAKING NEWS

56 ರಾಜ್ಯಸಭೆ ಸ್ಥಾನಗಳ ಚುನಾವಣೆ ದಿನಾಂಕ ಘೋಷಣೆ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಆಯೋಗವು ಚುನಾವಣೆಯ ದಿನಾಂಕವನ್ನು ಯಾವಾಗ ಘೋಷಿಸಲಿದೆ ಎಂಬ ಕುತೂಹಲ ರಾಜಕೀಯ ಪ್ರಿಯರಲ್ಲಿ ಇರುವಾಗಲೇ ಕೇಂದ್ರ ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯ ದಿನಾಂಕವನ್ನು ಘೋಷಿಸಿದೆ.

15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 15 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಎಂದು ಘೋಷಿಸಲಾಗಿದೆ. ಫೆಬ್ರವರಿ 27ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ತಿಳಿಸಲಾಗಿದೆ.

ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ ಒಟ್ಟು 56 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಯಾವ ರಾಜ್ಯದ ಎಷ್ಟು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂಬ ಪಟ್ಟಿ ಈ ಕೆಳಕಂಡಂತಿದೆ..

ಕರ್ನಾಟಕ – 4 ಸ್ಥಾನ
ಆಂಧ್ರಪ್ರದೇಶ – 3 ಸ್ಥಾನ
ಬಿಹಾರ – 6 ಸ್ಥಾನ
ಛತ್ತೀಸ್‌ಗಢ – 1 ಸ್ಥಾನ
ಗುಜರಾತ್ – ‌4 ಸ್ಥಾನ
ಹರಿಯಾಣ – 1 ಸ್ಥಾನ
ಹಿಮಾಚಲ ಪ್ರದೇಶ – 1 ಸ್ಥಾನ
ಮಧ್ಯಪ್ರದೇಶ – 5 ಸ್ಥಾನ
ಮಹಾರಾಷ್ಟ್ರ – 6 ಸ್ಥಾನ
ತೆಲಂಗಾಣ -3 ಸ್ಥಾನ
ಉತ್ತರ ಪ್ರದೇಶ – 10 ಸ್ಥಾನ
ಉತ್ತರಾಖಂಡ – 1 ಸ್ಥಾನ
ಪಶ್ಚಿಮ ಬಂಗಾಳ – 5 ಸ್ಥಾನ
ಒಡಿಶಾ – 3 ಸ್ಥಾನ
ರಾಜಸ್ಥಾನ -3 ಸ್ಥಾನ
ಒಟ್ಟು 56

andolana

Recent Posts

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

11 mins ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

30 mins ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

40 mins ago

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

57 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

1 hour ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

2 hours ago