BREAKING NEWS

ಪದವೀಧರ-ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ : ಮತದಾರರ ಪಟ್ಟಿ ಸಿದ್ಧಪಡಿಸಲು ಆಯೋಗ ಸೂಚನೆ

ಬೆಂಗಳೂರು : ವಿಧಾನ ಪರಿಷತ್‍ಗೆ ನಡೆಯುವ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸುವಂತೆ ಕೇಂದ್ರ ಚುನಾವಣಾ ಆಯೋಗ (ಸಿಇಸಿ) ಸೂಚನೆ ನೀಡಿದೆ. ಸೆ.30 ರಿಂದ ಮತದಾರರ ನೋಂದಣಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಿದೆ.

ನವೆಂಬರ್ 6 ರಂದು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದೆ. ಮತದಾರರ ಪಟ್ಟಿ ಕರಡು ಸಿದ್ದಪಡಿಸಲು ನ.20 ಕಡೆಯ ದಿನ. ನ.23 ರಂದು ಕರಡು ಪಟ್ಟಿಯನ್ನು ಪ್ರಕಟಿಸಬೇಕು. ನ.23 ರಿಂದ ಡಿ.9 ರವರೆಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.25 ರಂದು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಡಿ.30 ರಂದು ಅಂತಿಮವಾಗಿ ಮತದಾರರ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಆಯೋಗ ತಿಳಿಸಿದೆ.

ಒಟ್ಟು ಏಳು ಸ್ಥಾನಕ್ಕೆ ಚುನಾವಣೆ: 2024ರ ಜೂನ್ ತಿಂಗಳಲ್ಲಿ ಆರು ಮಂದಿಯ ಸದಸ್ಯತ್ವ ಮುಕ್ತಾಯವಾಗಲಿದೆ. ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರಿರುವ ಪುಟ್ಟಣ್ಣ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಹೀಗಾಗಿ ಒಟ್ಟು ಏಳು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ಚಂದ್ರಶೇಖರ್ ಬಿ. ಪಾಟೀಲï, ನೈರುತ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಎ.ದೇವೇಗೌಡ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ವೈ.ಎ ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಎಸ್.ಎಲ್ ಭೋಜೇಗೌಡ, ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಮರಿತಿಬ್ಬೇಗೌಡ ಅವರ ಅವ 2024ರ ಜೂನ್ ತಿಂಗಳಿಗೆ ಮುಕ್ತಾಯವಾಗಲಿದ್ದು, ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಪುಟ್ಟಣ್ಣ ಸ್ಥಾನಕ್ಕೆ ಉಪಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಪುಟ್ಟಣ್ಣ ಅವಯು 2026ರ ನವೆಂಬರ್‍ಗೆ ಮುಕ್ತಾಯವಾಗುತ್ತಿತ್ತು. ಆದರೆ, ಪುಟ್ಟಣ್ಣ ವಿಧಾನಸಭೆ ಚುನಾವಣೆಗೆ ಸ್ರ್ಪಧಿಸಿದ ಹಿನ್ನೆಲೆ ಮೇಲ್ಮನೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಅವರ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

ವಿಧಾನ ಪರಿಷತ್ ಸದಸ್ಯ ಸ್ಥಾನ ನಾಮನಿರ್ದೇಶನಕ್ಕೆ ಆಕ್ಷೇಪ: ಇತ್ತೀಚೆಗೆ(ಆ.5) ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನ ಶಿಫಾರಸು ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ದೂರು ದಾಖಲಾದ ಹಿನ್ನೆಲೆ ಪರಿಶೀಲನೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚನೆ ನೀಡಿದ್ದರು.

ರಾಜ್ಯಪಾಲರಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಜನ ಜಾಗೃತಿ ವೇದಿಕೆ ಮತ್ತು ನ್ಯಾಯಮಿತ್ರ ಸಂಘಟನೆಯ ಕಾರ್ಯದರ್ಶಿ ರಾಘವಾಚಾರ್ ಶಾಸ್ತ್ರಿ ಅವರು ದೂರು ನೀಡಿದ್ದರು. ಈ ದೂರು ಹಿನ್ನೆಲೆ ಆರೋಪದ ಬಗ್ಗೆ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚನೆ ನೀಡಿದ್ದರು.

ಎಂ.ಆರ್.ಸೀತಾರಾಮï, ಸುಧಾಮ್ ದಾಸ್ ಮತ್ತು ಮನ್ಸೂರ್ ಖಾನ್ ನಾಮನಿರ್ದೇಶನ ಶಿಫಾರಸು ಬಗ್ಗೆ ಆಕ್ಷೇಪಿಸಲಾಗಿತ್ತು. ಈ ಸಂಬಂಧ ರಾಜ್ಯಪಾಲರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪರಿಶೀಲಿಸುವಂತೆ ನಿರ್ದೇಶನ ನೀಡಿದ್ದರು. ಸಾಮಾಜಿಕ ಸೇವೆ ಕ್ಷೇತ್ರದಲ್ಲಿ ಸುಧಾಮ್ ದಾಸ್, ಶಿಕ್ಷಣ ಕ್ಷೇತ್ರದಲ್ಲಿ ಎಂ. ಆರ್. ಸೀತಾರಾಮ್ ಮತ್ತು ಸಹಕಾರ ಕ್ಷೇತ್ರದಿಂದ ಮನ್ಸೂರ್ ಖಾನ್ ಅವರನ್ನು ವಿಧಾನಪರಿಷತ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಿ ಶಿಫಾರಸು ಮಾಡಲಾಗಿತ್ತು. ಜುಲೈ 29ಕ್ಕೆ ಮೂವರ ನಾಮನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು.

andolanait

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

42 mins ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

45 mins ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

48 mins ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

50 mins ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

52 mins ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

55 mins ago