Mysore
17
clear sky

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ವಿದ್ಯುತ್‌ ಅವಘಡ| ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ: ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ : ನಿರ್ಮಾಣ ಹಂತದ ಮನೆಯಲ್ಲಿ ವಿದ್ಯುತ್ ತಗುಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಧಾವಿಸಿದ ಅವರು, ಮೃತ ಕುಟುಂಬದವರಿಗೆ ಸಾಂತ್ವನ ಹೇಳಿ, ಧೈರ್ಯವನ್ನು ತುಂಬಿದರು.

ಇದೇ ವೇಳೆ ಮುಖ್ಯಮಂತ್ರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಈ ಘಟನೆಯ ಬಗ್ಗೆ ವಿವರಿಸಿ, ಪ್ರತಿ ವ್ಯಕ್ತಿಗೆ ತಲಾ 2 ಲಕ್ಷ ರೂ,ಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಚಿವೆ, ʼʼನನ್ನ ಕರೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ತ್ವರಿತಗತಿಯಲ್ಲಿ ಪರಿಹಾರದ ಹಣ ಬಿಡುಗಡೆಗೊಳಿಸಲು ಆದೇಶ ಹೊರಡಿಸಿದ್ದಾರೆ, ಇದರ ಜತೆಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ತಕ್ಕ ಮಟ್ಟಿಗೆ ಆರ್ಥಿಕ ಸಹಾಯವನ್ನು ಸಹ ಮಾಡಿದ್ದೇನೆʼʼ ಎಂದು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!