ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ. ಮತ್ತೆ ವಿದ್ಯುತ್ ದರ ಏರಿಸುವ ಮೂಲಕ ಸರಕಾರ ಮತ್ತೆ ಹೊರೆ ಏರಿದೆ.
ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್ ದರವನ್ನು ಏರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ, ಬೆಸ್ಕಾಂ ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ 50 ಪೈಸೆ ಏರಿಕೆ ಮಾಡಲಾಗಿದೆ.
ಈ ಏರಿಕೆ ಇಂಧನ ಹೊಂದಾಣಿಕೆ ಶುಲ್ಕವನ್ನು ಮರುಪಡೆಯಲು ಮಾಡಿದ ವಾರ್ಷಿಕ ಪರಿಷ್ಕರಣೆಯ ಭಾಗವಾಗಿದೆ ಎಂದು ಇಲಾಖೆ ಹೇಳಿದೆ. ಆದೇಶವು ಎಲ್ಲಾ ಎಸ್ಕಾಮ್ಗಳಿಗೆ ಅನ್ವಯಿಸುತ್ತದೆ. ಇಂಧನ ಹೊಂದಾಣಿಕೆ ವೆಚ್ಚದಲ್ಲಿ ಜುಲೈ 1 ರಿಂದ ಡಿಸೆಂಬರ್ 31, 2023 ರವರೆಗೆ ಬದಲಾವಣೆ ಇರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ, ಜುಲೈ 1 ರಿಂದ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.
ಮೆಸ್ಕಾಂ (ಮಂಗಳೂರು) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 47 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 46 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.
ಸೆಸ್ಕಾಂ (ಮೈಸೂರು) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 41 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಹೆಸ್ಕಾಂ (ಹುಬ್ಬಳ್ಳಿ-ಧಾರವಾಡ) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 50 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.
ಗೆಸ್ಕಾಂ (ಕಲಬುರಗಿ) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 34 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 33 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಈ ನಡುವೆ ಬೆಸ್ಕಾಂ ಕೂಡ ವಿದ್ಯುತ್ ದರ ಪರಿಷ್ಕರಿಸಲು ಕೆಇಆರ್ಸಿ ಮುಂದೆ ಪರಿಶೀಲನಾ ಅರ್ಜಿ ಸಲ್ಲಿಸಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…