BREAKING NEWS

ಜು.1 ರಿಂದ ವಿದ್ಯುತ್ ದರ ಏರಿಕೆ: ಗೃಹಜ್ಯೋತಿ ಘೋಷಣೆ ಬೆನ್ನಲ್ಲೆ ರಾಜ್ಯ ಸರ್ಕಾರದಿಂದ ಶಾಕ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ  ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ. ಮತ್ತೆ ವಿದ್ಯುತ್‌ ದರ ಏರಿಸುವ ಮೂಲಕ ಸರಕಾರ ಮತ್ತೆ ಹೊರೆ ಏರಿದೆ.

ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್‌ ದರವನ್ನು ಏರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ, ಬೆಸ್ಕಾಂ ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ 50 ಪೈಸೆ ಏರಿಕೆ ಮಾಡಲಾಗಿದೆ.

ಈ ಏರಿಕೆ ಇಂಧನ ಹೊಂದಾಣಿಕೆ ಶುಲ್ಕವನ್ನು ಮರುಪಡೆಯಲು ಮಾಡಿದ ವಾರ್ಷಿಕ ಪರಿಷ್ಕರಣೆಯ ಭಾಗವಾಗಿದೆ ಎಂದು ಇಲಾಖೆ ಹೇಳಿದೆ. ಆದೇಶವು ಎಲ್ಲಾ ಎಸ್ಕಾಮ್‌ಗಳಿಗೆ ಅನ್ವಯಿಸುತ್ತದೆ. ಇಂಧನ ಹೊಂದಾಣಿಕೆ ವೆಚ್ಚದಲ್ಲಿ ಜುಲೈ 1 ರಿಂದ ಡಿಸೆಂಬರ್ 31, 2023 ರವರೆಗೆ ಬದಲಾವಣೆ ಇರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ, ಜುಲೈ 1 ರಿಂದ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.

ಮೆಸ್ಕಾಂ (ಮಂಗಳೂರು) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 47 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 46 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

ಸೆಸ್ಕಾಂ (ಮೈಸೂರು) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 41 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಹೆಸ್ಕಾಂ (ಹುಬ್ಬಳ್ಳಿ-ಧಾರವಾಡ) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 50 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

ಗೆಸ್ಕಾಂ (ಕಲಬುರಗಿ) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 34 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 33 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಈ ನಡುವೆ ಬೆಸ್ಕಾಂ ಕೂಡ ವಿದ್ಯುತ್ ದರ ಪರಿಷ್ಕರಿಸಲು ಕೆಇಆರ್‌ಸಿ ಮುಂದೆ ಪರಿಶೀಲನಾ ಅರ್ಜಿ ಸಲ್ಲಿಸಿದೆ.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

3 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

3 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

3 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

4 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

4 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

4 hours ago