ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ. ಮತ್ತೆ ವಿದ್ಯುತ್ ದರ ಏರಿಸುವ ಮೂಲಕ ಸರಕಾರ ಮತ್ತೆ ಹೊರೆ ಏರಿದೆ.
ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್ ದರವನ್ನು ಏರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ, ಬೆಸ್ಕಾಂ ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ 50 ಪೈಸೆ ಏರಿಕೆ ಮಾಡಲಾಗಿದೆ.
ಈ ಏರಿಕೆ ಇಂಧನ ಹೊಂದಾಣಿಕೆ ಶುಲ್ಕವನ್ನು ಮರುಪಡೆಯಲು ಮಾಡಿದ ವಾರ್ಷಿಕ ಪರಿಷ್ಕರಣೆಯ ಭಾಗವಾಗಿದೆ ಎಂದು ಇಲಾಖೆ ಹೇಳಿದೆ. ಆದೇಶವು ಎಲ್ಲಾ ಎಸ್ಕಾಮ್ಗಳಿಗೆ ಅನ್ವಯಿಸುತ್ತದೆ. ಇಂಧನ ಹೊಂದಾಣಿಕೆ ವೆಚ್ಚದಲ್ಲಿ ಜುಲೈ 1 ರಿಂದ ಡಿಸೆಂಬರ್ 31, 2023 ರವರೆಗೆ ಬದಲಾವಣೆ ಇರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ, ಜುಲೈ 1 ರಿಂದ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.
ಮೆಸ್ಕಾಂ (ಮಂಗಳೂರು) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 47 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 46 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.
ಸೆಸ್ಕಾಂ (ಮೈಸೂರು) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 41 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಹೆಸ್ಕಾಂ (ಹುಬ್ಬಳ್ಳಿ-ಧಾರವಾಡ) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 50 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.
ಗೆಸ್ಕಾಂ (ಕಲಬುರಗಿ) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 34 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 33 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಈ ನಡುವೆ ಬೆಸ್ಕಾಂ ಕೂಡ ವಿದ್ಯುತ್ ದರ ಪರಿಷ್ಕರಿಸಲು ಕೆಇಆರ್ಸಿ ಮುಂದೆ ಪರಿಶೀಲನಾ ಅರ್ಜಿ ಸಲ್ಲಿಸಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…