BREAKING NEWS

ಜು.1 ರಿಂದ ವಿದ್ಯುತ್ ದರ ಏರಿಕೆ: ಗೃಹಜ್ಯೋತಿ ಘೋಷಣೆ ಬೆನ್ನಲ್ಲೆ ರಾಜ್ಯ ಸರ್ಕಾರದಿಂದ ಶಾಕ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ  ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ. ಮತ್ತೆ ವಿದ್ಯುತ್‌ ದರ ಏರಿಸುವ ಮೂಲಕ ಸರಕಾರ ಮತ್ತೆ ಹೊರೆ ಏರಿದೆ.

ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್‌ ದರವನ್ನು ಏರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ, ಬೆಸ್ಕಾಂ ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ 50 ಪೈಸೆ ಏರಿಕೆ ಮಾಡಲಾಗಿದೆ.

ಈ ಏರಿಕೆ ಇಂಧನ ಹೊಂದಾಣಿಕೆ ಶುಲ್ಕವನ್ನು ಮರುಪಡೆಯಲು ಮಾಡಿದ ವಾರ್ಷಿಕ ಪರಿಷ್ಕರಣೆಯ ಭಾಗವಾಗಿದೆ ಎಂದು ಇಲಾಖೆ ಹೇಳಿದೆ. ಆದೇಶವು ಎಲ್ಲಾ ಎಸ್ಕಾಮ್‌ಗಳಿಗೆ ಅನ್ವಯಿಸುತ್ತದೆ. ಇಂಧನ ಹೊಂದಾಣಿಕೆ ವೆಚ್ಚದಲ್ಲಿ ಜುಲೈ 1 ರಿಂದ ಡಿಸೆಂಬರ್ 31, 2023 ರವರೆಗೆ ಬದಲಾವಣೆ ಇರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ, ಜುಲೈ 1 ರಿಂದ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.

ಮೆಸ್ಕಾಂ (ಮಂಗಳೂರು) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 47 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 46 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

ಸೆಸ್ಕಾಂ (ಮೈಸೂರು) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 41 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಹೆಸ್ಕಾಂ (ಹುಬ್ಬಳ್ಳಿ-ಧಾರವಾಡ) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 50 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

ಗೆಸ್ಕಾಂ (ಕಲಬುರಗಿ) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 34 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 33 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಈ ನಡುವೆ ಬೆಸ್ಕಾಂ ಕೂಡ ವಿದ್ಯುತ್ ದರ ಪರಿಷ್ಕರಿಸಲು ಕೆಇಆರ್‌ಸಿ ಮುಂದೆ ಪರಿಶೀಲನಾ ಅರ್ಜಿ ಸಲ್ಲಿಸಿದೆ.

andolanait

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

9 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

22 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

24 hours ago