BREAKING NEWS

ಜು.1 ರಿಂದ ವಿದ್ಯುತ್ ದರ ಏರಿಕೆ: ಗೃಹಜ್ಯೋತಿ ಘೋಷಣೆ ಬೆನ್ನಲ್ಲೆ ರಾಜ್ಯ ಸರ್ಕಾರದಿಂದ ಶಾಕ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ  ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ. ಮತ್ತೆ ವಿದ್ಯುತ್‌ ದರ ಏರಿಸುವ ಮೂಲಕ ಸರಕಾರ ಮತ್ತೆ ಹೊರೆ ಏರಿದೆ.

ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್‌ ದರವನ್ನು ಏರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ, ಬೆಸ್ಕಾಂ ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ 50 ಪೈಸೆ ಏರಿಕೆ ಮಾಡಲಾಗಿದೆ.

ಈ ಏರಿಕೆ ಇಂಧನ ಹೊಂದಾಣಿಕೆ ಶುಲ್ಕವನ್ನು ಮರುಪಡೆಯಲು ಮಾಡಿದ ವಾರ್ಷಿಕ ಪರಿಷ್ಕರಣೆಯ ಭಾಗವಾಗಿದೆ ಎಂದು ಇಲಾಖೆ ಹೇಳಿದೆ. ಆದೇಶವು ಎಲ್ಲಾ ಎಸ್ಕಾಮ್‌ಗಳಿಗೆ ಅನ್ವಯಿಸುತ್ತದೆ. ಇಂಧನ ಹೊಂದಾಣಿಕೆ ವೆಚ್ಚದಲ್ಲಿ ಜುಲೈ 1 ರಿಂದ ಡಿಸೆಂಬರ್ 31, 2023 ರವರೆಗೆ ಬದಲಾವಣೆ ಇರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ, ಜುಲೈ 1 ರಿಂದ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.

ಮೆಸ್ಕಾಂ (ಮಂಗಳೂರು) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 47 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 46 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

ಸೆಸ್ಕಾಂ (ಮೈಸೂರು) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 41 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಹೆಸ್ಕಾಂ (ಹುಬ್ಬಳ್ಳಿ-ಧಾರವಾಡ) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 50 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

ಗೆಸ್ಕಾಂ (ಕಲಬುರಗಿ) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 34 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 33 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಈ ನಡುವೆ ಬೆಸ್ಕಾಂ ಕೂಡ ವಿದ್ಯುತ್ ದರ ಪರಿಷ್ಕರಿಸಲು ಕೆಇಆರ್‌ಸಿ ಮುಂದೆ ಪರಿಶೀಲನಾ ಅರ್ಜಿ ಸಲ್ಲಿಸಿದೆ.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

6 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

7 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

8 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

8 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

8 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

16 hours ago