ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 46 ಲಕ್ಷ ಕುಟುಂಬಗಳಿಗೆ ನೀಡಲಾಗುತ್ತಿದ್ದ ವಿದ್ಯುತ್ ಸಬ್ಸಿಡಿ ಇಂದಿಗೆ ಕೊನೆಗೊಳ್ಳಲಿದೆ. ನಾಳೆಯಿಂದ ವಿದ್ಯುತ್ ಬಿಲ್ಗೆ ಸಬ್ಸಿಡಿ ನೀಡುವುದಿಲ್ಲ ಎಂದು ದೆಹಲಿ ವಿದ್ಯುತ್ ಸಚಿವೆ ಅತಿಶಿ ಮರ್ಲೆನಾ ಶುಕ್ರವಾರ ಘೋಷಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿರುವ ಅವರು, ವಿದ್ಯುತ್ ಸಬ್ಸಿಡಿ ದಿಢೀರ್ ಸ್ಥಗಿತವಾಗುತ್ತಿರುವುದು ಏಕೆ ಎಂಬ ಬಗ್ಗೆ ವಿವರಣೆಯನ್ನೂ ನೀಡಿದ್ದಾರೆ.
‘ವಿದ್ಯುತ್ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ. ಎಎಪಿ ಸರ್ಕಾರವು ಮುಂಬರುವ ವರ್ಷಕ್ಕೆ ಸಬ್ಸಿಡಿಯನ್ನು ಮುಂದುವರೆಸುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಆದರೆ, ಆ ನಿರ್ಧಾರಕ್ಕೆ ಸಂಬಂಧಿಸಿದ ಕಡತಕ್ಕೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರ ಅನುಮೋದನೆ ಬೇಕಾಗಿದೆ. ಆದರೆ ಅದು ಈ ವರೆಗೆ ಸಿಕ್ಕಿಲ್ಲ. ಹೀಗಾಗಿ ಸಬ್ಸಿಡಿ ಬಿಡುಗಡೆ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ಗಳ ನಡುವಿನ ವಿವಾದ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ, ಹಲವು ವಿಷಯಗಳಿಗೆ ಸಂಬಂಧಪಟ್ಟಂತೆ ವಾಗ್ವಾದಗಳು ನಡೆದಿವೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…