BREAKING NEWS

ಖ್ಯಾತ ಗಣಿತ ಶಾಸ್ತ್ರಜ್ಞ ಸಿಆರ್ ರಾವ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಅಮೆರಿಕದಲ್ಲಿ ನೆಲೆಸಿದ್ದ ಕರ್ನಾಟಕ ಮೂಲದ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದು, ಅವರಿಗೆ 102 ವರ್ಷ ವಯಸ್ಸಾಗಿತ್ತು.

‘ಪದ್ಮವಿಭೂಷಣ’ ಪ್ರಶಸ್ತಿ ವಿಜೇತ ಸಿ.ಆರ್. ರಾವ್ ಅವರು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಜನಿಸಿದ್ದರು.
ಗಣಿತ ಮತ್ತು ಸಂಖ್ಯಾ ಶಾಸ್ತ್ರ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ನೀಡಿ ಗೌರವಿಸಲಾಗಿದೆ.

ಸಿಆರ್ ರಾವ್ ಅವರು ‘ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023’, ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು.

ಸಿಆರ್ ರಾವ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು.

ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ಮಾತ್ರವಲ್ಲದೆ, ‘ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023’, ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಇನ್ನು ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು. ಇಂತಹ ಮೇರು ಸಾಧಕರ ನಿಧನ ನಾಡಿಗೆ ತುಂಬಿಬಾರದ ನಷ್ಟ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

6 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago