BREAKING NEWS

ಖ್ಯಾತ ಗಣಿತ ಶಾಸ್ತ್ರಜ್ಞ ಸಿಆರ್ ರಾವ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಅಮೆರಿಕದಲ್ಲಿ ನೆಲೆಸಿದ್ದ ಕರ್ನಾಟಕ ಮೂಲದ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದು, ಅವರಿಗೆ 102 ವರ್ಷ ವಯಸ್ಸಾಗಿತ್ತು.

‘ಪದ್ಮವಿಭೂಷಣ’ ಪ್ರಶಸ್ತಿ ವಿಜೇತ ಸಿ.ಆರ್. ರಾವ್ ಅವರು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಜನಿಸಿದ್ದರು.
ಗಣಿತ ಮತ್ತು ಸಂಖ್ಯಾ ಶಾಸ್ತ್ರ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ನೀಡಿ ಗೌರವಿಸಲಾಗಿದೆ.

ಸಿಆರ್ ರಾವ್ ಅವರು ‘ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023’, ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು.

ಸಿಆರ್ ರಾವ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು.

ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ಮಾತ್ರವಲ್ಲದೆ, ‘ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023’, ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಇನ್ನು ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು. ಇಂತಹ ಮೇರು ಸಾಧಕರ ನಿಧನ ನಾಡಿಗೆ ತುಂಬಿಬಾರದ ನಷ್ಟ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

16 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago