ರಾಮನಗರ : ತಾಲ್ಲೂಕಿನ ಕೆ.ಜಿ. ಹೊಸಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಉದ್ರಿಕ್ತರ ಗುಂಪೊಂದು ಗ್ರಾಮದಲ್ಲಿನ ಮನೆಗೆ ಬೆಂಕಿ ಇಟ್ಟಿದೆ. ಮನೆಯಲ್ಲಿನ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣ, ಬೈಕ್ ಬೆಂಕಿಗೆ ಆಹುತಿ ಆಗಿವೆ.
ಕೆ.ಜಿ. ಹೊಸಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ ಅಶ್ವತ್ಥ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರೇಮ ವಿವಾಹದ ಹಿನ್ನೆಲೆಯಲ್ಲಿ ಸ್ವಂತ ಭಾವಮೈದುನ ಹಾಗೂ ಸಹಚರರು ಭಾವನನ್ನು ಹತ್ಯೆ ಮಾಡಿದ್ದರು.
ಕೊಲೆ ಆರೋಪಿಯ ದೊಡ್ಡಮ್ಮ ಮಹದೇವಮ್ಮ ಎಂಬುವರ ಮನೆ ಕೆ.ಜಿ. ಹೊಸಹಳ್ಳಿಯಲ್ಲಿದೆ. ಸುದ್ದಿ ತಿಳಿಯುತ್ತಲೇ ಮಹದೇವಮ್ಮ ಮತ್ತು ಕುಟುಂಬಸ್ಥರು ಮನೆ ತೊರೆದಿದ್ದರು. ಕೊಲೆಗೆ ಅವರ ಪ್ರಚೋದನೆ ಕಾರಣ ಎಂಬ ಅನುಮಾನದ ಹಿನ್ನೆಲೆಯಲ್ಲಿ ಗ್ರಾಮದ ಕೆಲವರು ಮನೆಗೆ ಬೆಂಕಿ ಹಾಕಿದ್ದರು.
ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು. ಘಟನೆ ಸಂಬಂಧ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಸ್ಥಳದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.
ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಡಿವೈಎಸ್ಪಿ ದಿನಕರ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬುಧವಾರ ಬೆಳಿಗ್ಗೆ ಅಶ್ವತ್ಥ ಅಂತ್ಯಕ್ರಿಯೆಯು ಗ್ರಾಮದಲ್ಲಿ ನಡೆಯಿತು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…