BREAKING NEWS

ಪ್ರೇಮ ವಿವಾಹದ ಹಿನ್ನೆಲೆಯಲ್ಲಿ ಭಾವನ ಕೊಲೆ : ಮನೆಗೆ ಬೆಂಕಿ

ರಾಮನಗರ : ತಾಲ್ಲೂಕಿನ ಕೆ.ಜಿ. ಹೊಸಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಉದ್ರಿಕ್ತರ ಗುಂಪೊಂದು ಗ್ರಾಮದಲ್ಲಿನ ಮನೆಗೆ ಬೆಂಕಿ ಇಟ್ಟಿದೆ. ಮನೆಯಲ್ಲಿನ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣ, ಬೈಕ್ ಬೆಂಕಿಗೆ ಆಹುತಿ ಆಗಿವೆ.

ಕೆ.ಜಿ. ಹೊಸಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ ಅಶ್ವತ್ಥ ಎಂಬ ಯುವಕನನ್ನು ಬರ್ಬರವಾಗಿ‌ ಹತ್ಯೆ ಮಾಡಲಾಗಿತ್ತು. ಪ್ರೇಮ ವಿವಾಹದ ಹಿನ್ನೆಲೆಯಲ್ಲಿ ಸ್ವಂತ ಭಾವಮೈದುನ ಹಾಗೂ ಸಹಚರರು ಭಾವನನ್ನು ಹತ್ಯೆ ಮಾಡಿದ್ದರು.

ಕೊಲೆ ಆರೋಪಿಯ ದೊಡ್ಡಮ್ಮ ಮಹದೇವಮ್ಮ ಎಂಬುವರ ಮನೆ ಕೆ.ಜಿ. ಹೊಸಹಳ್ಳಿಯಲ್ಲಿದೆ. ಸುದ್ದಿ ತಿಳಿಯುತ್ತಲೇ ಮಹದೇವಮ್ಮ ಮತ್ತು ಕುಟುಂಬಸ್ಥರು ಮನೆ ತೊರೆದಿದ್ದರು. ಕೊಲೆಗೆ ಅವರ ಪ್ರಚೋದನೆ ಕಾರಣ ಎಂಬ ಅನುಮಾನದ ಹಿನ್ನೆಲೆಯಲ್ಲಿ ಗ್ರಾಮದ ಕೆಲವರು ಮನೆಗೆ ಬೆಂಕಿ ಹಾಕಿದ್ದರು.

ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು. ಘಟನೆ ಸಂಬಂಧ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಸ್ಥಳದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.

ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ ರೆಡ್ಡಿ, ಡಿವೈಎಸ್‌ಪಿ ದಿನಕರ್‌ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬುಧವಾರ ಬೆಳಿಗ್ಗೆ ಅಶ್ವತ್ಥ ಅಂತ್ಯಕ್ರಿಯೆಯು ಗ್ರಾಮದಲ್ಲಿ ನಡೆಯಿತು.

lokesh

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

5 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

5 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

6 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

7 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

7 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

8 hours ago