BREAKING NEWS

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್ ಕೌಂಟರ್: 5 ವಿದೇಶಿ ಉಗ್ರರ ಹತ್ಯೆ

ಜಮ್ಮು-ಕಾಶ್ಮೀರ: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭಾರತೀಯ ಸೇನೆ ಯೋಧರು ಮತ್ತು ಪೊಲೀಸರ ಜಂಟಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ. ಎಲ್‌ಒಸಿ ಬಳಿಯ ಜುಮಗುಂಡ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳು ನಿರ್ದಿಷ್ಟ ಮಾಹಿತಿ ಪಡೆದ ನಂತರ ಎನ್‌ಕೌಂಟರ್ ನಡೆಯಿತು.

 

ಕುಪ್ವಾರಾ ಜಿಲ್ಲೆಯ ಎಲ್‌ಒಸಿಯ ಜುಮಗುಂಡ್ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನಗಳ ಬಗ್ಗೆ ಪೊಲೀಸರು ಮತ್ತು ಸೇನಾಪಡೆ ಯೋಧರು ನಿರ್ದಿಷ್ಟ ಮಾಹಿತಿ ಪಡೆದರು. ಭಯೋತ್ಪಾದಕರ ಇರುವಿಕೆಯನ್ನು ಖಚಿತಪಡಿಸಿಕೊಂಡು ಶರಣಾಗಲು ಸೂಚಿಸಿದಾಗ ಎನ್ ಕೌಂಟರ್ ನಡೆಯಿತು.

ಜೂನ್ 13 ರಂದು ಕುಪ್ವಾರದ ಎಲ್‌ಒಸಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು. ಕುಪ್ವಾರಾ ಜಿಲ್ಲೆಯ ದೋಬನಾರ್ ಮಚ್ಚಲ್ ಪ್ರದೇಶದಲ್ಲಿ (LOC) ಸೇನೆ ಮತ್ತು ಕುಪ್ವಾರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಮಾಡಲಾಗಿದೆ. ಶೋಧ ಇನ್ನೂ ಮುಂದುವರೆದಿದೆ ಎಂದು ಅದು ಟ್ವೀಟ್ ಮಾಡಿದೆ.

ಈ ತಿಂಗಳ ಆರಂಭದಲ್ಲಿ, ಜೂನ್ 2 ರಂದು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರರನ್ನು ಕೊಲ್ಲಲಾಗಿದೆ. ರಜೌರಿ ಬಳಿಯ ದಸ್ಸಾಲ್ ಗುಜ್ರಾನ್ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ನಂತರ ಸೇನೆ ಮತ್ತು ಪೊಲೀಸರು ಜಂಟಿಯಾಗಿ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಯೋತ್ಪಾದಕರು ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

2 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

2 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

2 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

2 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

2 hours ago